<p class="title"><strong>ಪಣಜಿ:</strong> ಚುನಾವಣೆಯ ಹೊಸ್ತಿಲಲ್ಲಿರುವ ಗೋವಾದಲ್ಲಿ ಮಹದಾಯಿ ಜಲವಿವಾದ ಮತ್ತೆ ತಲೆ ಎತ್ತಿದೆ.</p>.<p class="title">ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿ ಉಭಯ ರಾಜ್ಯಗಳ ನಡುವಿನ ನದಿಯ ನೀರು ಹಂಚಿಕೆ ವಿಷಯದಲ್ಲಿ ಗೋವಾದ ಹಿತಾಸಕ್ತಿಗಳನ್ನು ಬದಿಗೊತ್ತಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಶುಕ್ರವಾರ ವಾಗ್ದಾಳಿ ನಡೆಸಿದೆ.</p>.<p class="title">ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಿಎಂಸಿ ಮುಖಂಡ ಹಾಗೂ ಸಂಸದ ಮಹುವಾ ಮೊಯಿತ್ರಾ, ‘ಮಹದಾಯಿ ಜಲವಿವಾದವು ನ್ಯಾಯಮಂಡಳಿಯಲ್ಲಿ ವಿಚಾರಣೆಯ ಅಂತಿಮ ಹಂತದಲ್ಲಿದ್ದರೂ ಕರ್ನಾಟಕವು ಒಪ್ಪಂದ ಮಾಡಿಕೊಂಡಿದ್ದರಿಂದ ಮಹದಾಯಿ ನೀರನ್ನು ಮಲಪ್ರಭಾ ಜಲಾನಯನ ಪ್ರದೇಶಕ್ಕೆ ಹರಿಸಲು ಸಾಧ್ಯವಾಗಿದೆ’ ಎಂದು ಹೇಳಿದರು. </p>.<p class="bodytext">‘ಕರ್ನಾಟಕಕ್ಕೆ 7.5 ಟಿಎಂಸಿ ನೀರು ಹಂಚಿಕೆಯಾಗಿದೆ. ಆದರೆ ಸಾವಂತ್ ಮುಖ್ಯಮಂತ್ರಿಯಾದ ನಂತರ ಕರ್ನಾಟಕ ನಿಗದಿಗಿಂತ ಹೆಚ್ಚು ನೀರು ಪಡೆಯುತ್ತಿದೆ. ಕರ್ನಾಟಕದ ಹಿರಿಯ ಮುಖಂಡರುಗಳು ತಾವು ಸಾವಂತ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಇನ್ನು ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿಕೊಂಡಿದ್ದಾರೆ’ ಎಂದು ಮೊಯಿತ್ರಾ ಆರೋಪಿಸಿದರು.</p>.<p class="bodytext">ಸುಪ್ರೀಂಕೋರ್ಟ್ನಲ್ಲಿ ಹಂಚಿಕೆ ಸಂಬಂಧ ಅರ್ಜಿಯೊಂದು ವಿಚಾರಣೆಗೆ ಬಾಕಿ ಇರುವಾಗ ಗೋವಾ ಹೇಗೆ ಕರ್ನಾಟಕಕ್ಕೆ ಆಕ್ಷೇಪಣಾ ರಹಿತ ಪತ್ರವನ್ನು ನೀಡಿದೆ ಎಂದು ಮೊಯಿತ್ರಾ ಇದೇ ವೇಳೆ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಣಜಿ:</strong> ಚುನಾವಣೆಯ ಹೊಸ್ತಿಲಲ್ಲಿರುವ ಗೋವಾದಲ್ಲಿ ಮಹದಾಯಿ ಜಲವಿವಾದ ಮತ್ತೆ ತಲೆ ಎತ್ತಿದೆ.</p>.<p class="title">ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿ ಉಭಯ ರಾಜ್ಯಗಳ ನಡುವಿನ ನದಿಯ ನೀರು ಹಂಚಿಕೆ ವಿಷಯದಲ್ಲಿ ಗೋವಾದ ಹಿತಾಸಕ್ತಿಗಳನ್ನು ಬದಿಗೊತ್ತಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಶುಕ್ರವಾರ ವಾಗ್ದಾಳಿ ನಡೆಸಿದೆ.</p>.<p class="title">ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಿಎಂಸಿ ಮುಖಂಡ ಹಾಗೂ ಸಂಸದ ಮಹುವಾ ಮೊಯಿತ್ರಾ, ‘ಮಹದಾಯಿ ಜಲವಿವಾದವು ನ್ಯಾಯಮಂಡಳಿಯಲ್ಲಿ ವಿಚಾರಣೆಯ ಅಂತಿಮ ಹಂತದಲ್ಲಿದ್ದರೂ ಕರ್ನಾಟಕವು ಒಪ್ಪಂದ ಮಾಡಿಕೊಂಡಿದ್ದರಿಂದ ಮಹದಾಯಿ ನೀರನ್ನು ಮಲಪ್ರಭಾ ಜಲಾನಯನ ಪ್ರದೇಶಕ್ಕೆ ಹರಿಸಲು ಸಾಧ್ಯವಾಗಿದೆ’ ಎಂದು ಹೇಳಿದರು. </p>.<p class="bodytext">‘ಕರ್ನಾಟಕಕ್ಕೆ 7.5 ಟಿಎಂಸಿ ನೀರು ಹಂಚಿಕೆಯಾಗಿದೆ. ಆದರೆ ಸಾವಂತ್ ಮುಖ್ಯಮಂತ್ರಿಯಾದ ನಂತರ ಕರ್ನಾಟಕ ನಿಗದಿಗಿಂತ ಹೆಚ್ಚು ನೀರು ಪಡೆಯುತ್ತಿದೆ. ಕರ್ನಾಟಕದ ಹಿರಿಯ ಮುಖಂಡರುಗಳು ತಾವು ಸಾವಂತ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಇನ್ನು ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿಕೊಂಡಿದ್ದಾರೆ’ ಎಂದು ಮೊಯಿತ್ರಾ ಆರೋಪಿಸಿದರು.</p>.<p class="bodytext">ಸುಪ್ರೀಂಕೋರ್ಟ್ನಲ್ಲಿ ಹಂಚಿಕೆ ಸಂಬಂಧ ಅರ್ಜಿಯೊಂದು ವಿಚಾರಣೆಗೆ ಬಾಕಿ ಇರುವಾಗ ಗೋವಾ ಹೇಗೆ ಕರ್ನಾಟಕಕ್ಕೆ ಆಕ್ಷೇಪಣಾ ರಹಿತ ಪತ್ರವನ್ನು ನೀಡಿದೆ ಎಂದು ಮೊಯಿತ್ರಾ ಇದೇ ವೇಳೆ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>