<p><strong>ಪಣಜಿ: </strong>ಮಹದಾಯಿ ವಿವಾದದ ಕುರಿತು ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದು, ಆ ರಾಜ್ಯದೊಂದಿಗೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ಹೇಳಿದ್ದಾರೆ.</p>.<p>‘ಅರ್ಜಿಯನ್ನು ಸಲ್ಲಿಸುವ ಮೂಲಕ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ.ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಸರಿಯಾದ ದಾರಿಯಲ್ಲಿ ಇದ್ದೇವೆ’ ಎಂದು ಹೇಳಿದ್ದಾರೆ. ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.</p>.<p>‘ಗೋವಾ ಮುಖ್ಯಮಂತ್ರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವುದೇಕೆ ಎಂದು ಅರ್ಥವಾಗುತ್ತಿಲ್ಲ. ಕರ್ನಾಟಕವು ಮಹದಾಯಿ ಯೋಜನೆಯನ್ನು ಮುಂದುವರಿಸಲಿದೆ’ ಎಂದು ಪ್ರಲ್ಹಾದ ಜೋಶಿ ಮಂಗಳವಾರ ಹೇಳಿದ್ದರು.</p>.<p>ಕರ್ನಾಟಕವು ಮಹದಾಯಿ ಜಲಾಯನ ಪ್ರದೇಶದ ನೀರನ್ನು ಕಳಸಾ–ಬಂಡೂರ ಕಾಲುವೆ ಮೂಲಕ ತಿರುಗಿಸುತ್ತಿದೆ. 13.42 ಟಿಎಂಸಿ ನೀರನ್ನು ಬಳಸಿಕೊಳ್ಳಲು ಮುಂದಾಗುವ ಮೂಲಕ ಕಾನೂನು ಉಲ್ಲಂಘಿಸುತ್ತಿದೆ. ಈ ಯೋಜನೆಯಿಂದ ಪರಿಸರ ವೈವಿಧ್ಯತೆಗೆ ಧಕ್ಕೆಯಾಗಲಿದೆ ಎಂದು ಗೋವಾ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ: </strong>ಮಹದಾಯಿ ವಿವಾದದ ಕುರಿತು ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದು, ಆ ರಾಜ್ಯದೊಂದಿಗೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ಹೇಳಿದ್ದಾರೆ.</p>.<p>‘ಅರ್ಜಿಯನ್ನು ಸಲ್ಲಿಸುವ ಮೂಲಕ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ.ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಸರಿಯಾದ ದಾರಿಯಲ್ಲಿ ಇದ್ದೇವೆ’ ಎಂದು ಹೇಳಿದ್ದಾರೆ. ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.</p>.<p>‘ಗೋವಾ ಮುಖ್ಯಮಂತ್ರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವುದೇಕೆ ಎಂದು ಅರ್ಥವಾಗುತ್ತಿಲ್ಲ. ಕರ್ನಾಟಕವು ಮಹದಾಯಿ ಯೋಜನೆಯನ್ನು ಮುಂದುವರಿಸಲಿದೆ’ ಎಂದು ಪ್ರಲ್ಹಾದ ಜೋಶಿ ಮಂಗಳವಾರ ಹೇಳಿದ್ದರು.</p>.<p>ಕರ್ನಾಟಕವು ಮಹದಾಯಿ ಜಲಾಯನ ಪ್ರದೇಶದ ನೀರನ್ನು ಕಳಸಾ–ಬಂಡೂರ ಕಾಲುವೆ ಮೂಲಕ ತಿರುಗಿಸುತ್ತಿದೆ. 13.42 ಟಿಎಂಸಿ ನೀರನ್ನು ಬಳಸಿಕೊಳ್ಳಲು ಮುಂದಾಗುವ ಮೂಲಕ ಕಾನೂನು ಉಲ್ಲಂಘಿಸುತ್ತಿದೆ. ಈ ಯೋಜನೆಯಿಂದ ಪರಿಸರ ವೈವಿಧ್ಯತೆಗೆ ಧಕ್ಕೆಯಾಗಲಿದೆ ಎಂದು ಗೋವಾ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>