ಕರ್ನಾಟಕ ನದಿ ನೀರು ತಿರುಗಿಸುವುದರಿಂದ ಮಹದಾಯಿ ಅಭಯಾರಣ್ಯಕ್ಕೆ ತೊಂದರೆ ಆಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಕರ್ನಾಟಕಕ್ಕೆ ಈಗಾಗಲೇ ಗೋವಾ ಸರ್ಕಾರ ನೋಟಿಸ್ ನೀಡಿದೆ. ಈ ತಡೆಯನ್ನು ನಿವಾರಿಸಿಕೊಂಡು ಮುಂದುವರೆಯಲು ಕರ್ನಾಟಕಕ್ಕೆ ಸಾಧ್ಯವಿಲ್ಲ. ಅರಣ್ಯ ಮತ್ತು ವನ್ಯಜೀವಿ ಅನುಮತಿ ಸಿಗದ ಕಾರಣ ಈ ಯೋಜನೆ ರದ್ದಾಗುತ್ತದೆ. ನದಿ ನೀರನ್ನು ತಿರುಗಿಸಲು ಕೇಂದ್ರ ಜಲಶಕ್ತಿ ಸಚಿವಾಲಯ ಅನುಮತಿ ನೀಡುವುದಿಲ್ಲ ಎಂದು ಅವರು ಹೇಳಿದರು.