<p><strong>ಮುಂಬೈ:</strong> ಮಹಾರಾಷ್ಟ್ರದ ಬೋಯಿಸಾರ್ನ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಿತಗೊಂಡಿರುವ ಜಖರಿಯಾ ಫ್ಯಾಬ್ರಿಕ್ ಲಿಮಿಟೆಡ್ನಲ್ಲಿ ಶನಿವಾರ ಬೆಳಗ್ಗೆ 6 ಗಂಟೆ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/scientists-believe-cow-only-animal-that-inhales-exhales-oxygen-allahabad-high-court-863574.html" itemprop="url">ಗೋವು ಆಮ್ಲಜನಕ ಹೀರಿ, ಅದನ್ನೇ ಬಿಡುತ್ತೆ ಎಂಬುದು ವಿಜ್ಞಾನಿಗಳ ನಂಬಿಕೆ: ಹೈಕೋರ್ಟ್ </a></p>.<p>ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ.</p>.<p>ಸ್ಫೋಟದಿಂದಾಗಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣಕ್ಕೆ ಘಟನೆ ಹಿಂದಿನ ಕಾರಣಗಳು ತಿಳಿದು ಬಂದಿಲ್ಲ.</p>.<p>ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಬೋಯಿಸಾರ್ನ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಿತಗೊಂಡಿರುವ ಜಖರಿಯಾ ಫ್ಯಾಬ್ರಿಕ್ ಲಿಮಿಟೆಡ್ನಲ್ಲಿ ಶನಿವಾರ ಬೆಳಗ್ಗೆ 6 ಗಂಟೆ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/scientists-believe-cow-only-animal-that-inhales-exhales-oxygen-allahabad-high-court-863574.html" itemprop="url">ಗೋವು ಆಮ್ಲಜನಕ ಹೀರಿ, ಅದನ್ನೇ ಬಿಡುತ್ತೆ ಎಂಬುದು ವಿಜ್ಞಾನಿಗಳ ನಂಬಿಕೆ: ಹೈಕೋರ್ಟ್ </a></p>.<p>ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ.</p>.<p>ಸ್ಫೋಟದಿಂದಾಗಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣಕ್ಕೆ ಘಟನೆ ಹಿಂದಿನ ಕಾರಣಗಳು ತಿಳಿದು ಬಂದಿಲ್ಲ.</p>.<p>ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>