ಮುಂಬೈ: ಮಹಾರಾಷ್ಟ್ರದಲ್ಲಿ ಜೂನ್ 1 ರಿಂದ ಈವರೆಗೆ ಒಟ್ಟು 76 ಜನರು ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 9 ಮಂದಿ ಮೃತಪಟ್ಟಿದ್ದು, ಜೂನ್ 1 ರಿಂದ (ಈವರೆಗೆ) ಒಟ್ಟು 76 ಜನರು ಅಸುನೀಗಿದ್ದಾರೆ
ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ಮಳೆಯಿಂದಾಗಿ 838 ಮನೆಗಳಿಗೆ ಹಾನಿಯಾಗಿದೆ. 4,916 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪುನರ್ವಸತಿ ಇಲಾಖೆಯಿಂದ 35 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ.
ಜೂನ್ 1 ರಿಂದ ಮಹಾರಾಷ್ಟ್ರದಲ್ಲಿ ಮಳೆ ಹಾಗೂ ಪ್ರವಾಹ ಸಂಬಂಧಿತ ಘಟನೆಗಳಲ್ಲಿ 125 ಪ್ರಾಣಿಗಳು ಪ್ರಾಣ ಕಳೆದುಕೊಂಡಿವೆ.