<p class="title"><strong>ನಾಗ್ಪುರ (ಪಿಟಿಐ):</strong> ಮಹಾರಾಷ್ಟ್ರ ವಿಧಾನಸಭೆಯುಲೋಕಾಯುಕ್ತ ಮಸೂದೆ 2022 ಅನ್ನು ಬುಧವಾರ ಅಂಗೀಕರಿಸಿತು. ಈ ಮಸೂದೆಯ ಮೂಲಕ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರನ್ನು ಭ್ರಷ್ಟಾಚಾರ ತಡೆ ಒಂಬುಡ್ಸ್ಮೆನ್ ವ್ಯಾಪ್ತಿಯೊಳಗೆ ತರಲಾಗಿದೆ.</p>.<p>ಶಿಕ್ಷಕ ಪ್ರವೇಶ ಪರೀಕ್ಷೆ ಹಗರಣ ಸಂಬಂಧ ವಿರೋಧ ಪಕ್ಷಗಳು ಸದನದಿಂದ ಹೊರನಡೆದಿದ್ದರಿಂದ ಚರ್ಚೆ ನಡೆಸದೆಯೇ ಮಸೂದೆಯನ್ನು ಅಂಗೀಕರಿಸಲಾಯಿತು.</p>.<p>ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಬೇಕು ಎಂದಾದರೆ, ಅಧಿವೇಶನದಲ್ಲಿ ಮುಖ್ಯಮಂತ್ರಿ ವಿರುದ್ಧ ಆರೋಪಗಳನ್ನು ಮಂಡಿಸಬೇಕಾಗುತ್ತದೆ. ಮೂರನೇ ಒಂದು ಭಾಗದಷ್ಟು ಶಾಸಕರು ಒಪ್ಪಿಗೆ ನೀಡಿದರೆ ಮಾತ್ರವೇ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸಬಹುದಾಗಿದೆ ಎಂದು ಮಸೂದೆಯಲ್ಲಿ ಹೇಳಲಾಗಿದೆ.</p>.<p>‘ಇದೊಂದು ಐತಿಹಾಸಿಕ ಮಸೂದೆಯಾಗಿದೆ. ಇಂಥ ಕಾನೂನು ತರುತ್ತಿರುವ ಮೊದಲ ರಾಜ್ಯ ನಮ್ಮದು’ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನಾಗ್ಪುರ (ಪಿಟಿಐ):</strong> ಮಹಾರಾಷ್ಟ್ರ ವಿಧಾನಸಭೆಯುಲೋಕಾಯುಕ್ತ ಮಸೂದೆ 2022 ಅನ್ನು ಬುಧವಾರ ಅಂಗೀಕರಿಸಿತು. ಈ ಮಸೂದೆಯ ಮೂಲಕ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರನ್ನು ಭ್ರಷ್ಟಾಚಾರ ತಡೆ ಒಂಬುಡ್ಸ್ಮೆನ್ ವ್ಯಾಪ್ತಿಯೊಳಗೆ ತರಲಾಗಿದೆ.</p>.<p>ಶಿಕ್ಷಕ ಪ್ರವೇಶ ಪರೀಕ್ಷೆ ಹಗರಣ ಸಂಬಂಧ ವಿರೋಧ ಪಕ್ಷಗಳು ಸದನದಿಂದ ಹೊರನಡೆದಿದ್ದರಿಂದ ಚರ್ಚೆ ನಡೆಸದೆಯೇ ಮಸೂದೆಯನ್ನು ಅಂಗೀಕರಿಸಲಾಯಿತು.</p>.<p>ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಬೇಕು ಎಂದಾದರೆ, ಅಧಿವೇಶನದಲ್ಲಿ ಮುಖ್ಯಮಂತ್ರಿ ವಿರುದ್ಧ ಆರೋಪಗಳನ್ನು ಮಂಡಿಸಬೇಕಾಗುತ್ತದೆ. ಮೂರನೇ ಒಂದು ಭಾಗದಷ್ಟು ಶಾಸಕರು ಒಪ್ಪಿಗೆ ನೀಡಿದರೆ ಮಾತ್ರವೇ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸಬಹುದಾಗಿದೆ ಎಂದು ಮಸೂದೆಯಲ್ಲಿ ಹೇಳಲಾಗಿದೆ.</p>.<p>‘ಇದೊಂದು ಐತಿಹಾಸಿಕ ಮಸೂದೆಯಾಗಿದೆ. ಇಂಥ ಕಾನೂನು ತರುತ್ತಿರುವ ಮೊದಲ ರಾಜ್ಯ ನಮ್ಮದು’ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>