ಮುಂಬೈ: ದೆಹಲಿ ಪೊಲೀಸರು ಇತ್ತೀಚೆಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲಿತ ಭಯೋತ್ಪಾದನಾ ಕೃತ್ಯದ ಷಡ್ಯಂತ್ರವನ್ನು ಬಯಲಿಗೆಳೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ವ್ಯಕ್ತಿಯನ್ನು ಠಾಣೆ ಜಿಲ್ಲೆಯ ಮುಂಬ್ರಾ ಪಟ್ಟಣದಲ್ಲಿ ಬಂಧಿಸಲಾಗಿದ್ದು, ಬಂಧಿತನ ಕುರಿತು ಹೆಚ್ಚಿನ ವಿವರಗಳನ್ನು ಎಟಿಎಸ್ ಬಿಡುಗಡೆ ಮಾಡಿಲ್ಲ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಜೋಗೇಶ್ವರಿಯಲ್ಲಿ ಝಾಕೀರ್ ಹುಸೇನ್ ಶೇಖ್ (45) ಎಂಬಾತನ್ನು ಎಟಿಎಸ್ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದರು. ಶೇಖ್ ನೀಡಿ ಮಾಹಿತಿ ಮೇರೆಗೆ ಈತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.