ಮುಂಬೈ: ಮಹಾರಾಷ್ಟ್ರದಲ್ಲಿ ಎರಡು ನಗರಗಳ ಮರುನಾಮಕರಣ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ ಮುಖಂಡ ಸಿ.ಟಿ.ರವಿ, ‘ಮಹಾ ವಸೂಲಿ ಆಘಾಡಿ ಸರ್ಕಾರ ತೆಗೆದುಕೊಂಡ ನಿರ್ಧಾರವು ತೀವ್ರ ನಗು ತರಿಸಿದೆ. ಅದನ್ನು ತಡೆಯಲು ಸಾಧ್ಯವಾಗುತ್ತಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.
‘ಕಳೆದ ಮೂರು ವರ್ಷಗಳಿಂದ ಜಾತ್ಯತೀತ ರಾಜಕಾರಣದಲ್ಲಿ ಉದ್ಧವ್ ಠಾಕ್ರೆ ತೊಡಗಿಸಿಕೊಂಡಿದ್ದರು. ತಮ್ಮ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಹಿಂದುತ್ವದ ರುಜುವಾತುಗಳನ್ನು ಸಾಬೀತುಪಡಿಸಲು ಯತ್ನಿಸುತ್ತಿದ್ದಾರೆ’ ಎಂದು ಸಿ.ಟಿ.ರವಿ ಟೀಕಿಸಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ ಹಾಗೂ ಉಸ್ಮಾನಾಬಾದ್ ನಗರಗಳ ಹೆಸರನ್ನು ಬದಲಿಸಿ ಶಿವಸೇನಾ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ. ಔರಂಗಾಬಾದ್ ಅನ್ನು ಸಂಭಾಜಿನಗರವೆಂದೂ, ಉಸ್ಮಾನಾಬಾದ್ ಅನ್ನು ಧರಶಿವ ಎಂದು ಮರುನಾಮಕರಣ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.