<p><strong>ಮುಂಬೈ: </strong>ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗಗಳು ಹೆಚ್ಚು ಬಾಧಿತವಾಗಿವೆ.</p>.<p>ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಅಧಿಕಾರಿಗಳ ಸಭೆ ನಡೆಸಿ, ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಸೂಚಿಸಿದರು.</p>.<p>ಮಳೆಯಿಂದ ಆಗಿರುವ ಹಾನಿ ಕುರಿತು ತ್ವರಿತವಾಗಿ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಕಂದಾಯ, ಕೃಷಿ ಇಲಾಖೆಗಳಿಗೆ ನಿರ್ದೇಶನ ನೀಡಿದರು.</p>.<p>ಅಗ್ನಿ ಶಾಮಕ ದಳ ಹಾಗೂ ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ (ಆರ್ಡಿಎಂಸಿ) ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.</p>.<p>ಮಳೆ ಹಾಗೂ ಪ್ರವಾಹ ಕಾರಣದಿಂದ ಆಗಿರುವ ಅವಘಡಗಳಲ್ಲಿ ಕನಿಷ್ಠ 13 ಜನರು ಮೃತಪಟ್ಟಿದ್ದರೆ, ರಾಜ್ಯದ ವಿವಿಧ ಭಾಗಗಳಲ್ಲಿ ತೊಂದರೆಗೆ ಸಿಲುಕಿದ್ದ 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>17 ಜನರ ರಕ್ಷಣೆ: ನವಿ ಮುಂಬೈ ಬಳಿಯ ಪಾಂಡವಕಡಾ ಜಲಪಾತದ ಬಳಿ ಸಿಲುಕಿದ್ದ 17 ಜನ ಪ್ರವಾಸಿಗರನ್ನು ರಕ್ಷಿಸಲಾಗಿದೆ.</p>.<p>ಪಾಲ್ಘರ್ ಹಾಗೂ ಠಾಣೆ ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಬುಧವಾರ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಲ್ಘರ್, ಭಿವಂಡಿ, ಕಲ್ಯಾಣ್, ಉಲ್ಹಾಸ್ನಗರದಲ್ಲಿ ಭಾರಿ ಹಾನಿಯಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಮರಾಠವಾಡದಲ್ಲಿ ಭಾರಿ ಮಳೆ ಬೀಳುತ್ತಿರುವ ಕಾರಣ ಗೋದಾವರಿ ನದಿಗೆ ನಿರ್ಮಿಸಿರುವ ಜಾಯಕವಾಡಿ ಅಣೆಕಟ್ಟೆಗೆ ಒಳಹರಿವು ಹೆಚ್ಚಿದೆ. ಬುಧವಾರ 18 ಗೇಟ್ಗಳ ಮೂಲಕ 66,000 ಕ್ಯುಸೆಕ್ನಷ್ಟು ನೀರನ್ನು ನದಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p><strong>ವಾಯುಪಡೆ ತಂಡದಿಂದ ಮೂವರ ರಕ್ಷಣೆ:</strong> ಮಾಂಜರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಟ್ಟ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಲಾತೂರ್ ಜಿಲ್ಲೆಯ ರೇಣಾಪುರ ತಾಲ್ಲೂಕಿನ ಪೊಹರೆಗಾಂವ ಗ್ರಾಮದ ಮೂವರು ಪ್ರವಾಹದಲ್ಲಿ ಸಿಲುಕಿದ್ದರು. ವಾಯುಪಡೆಯ ಹೆಲಿಕಾಪ್ಟರ್ನ ನೆರವಿನಿಂದ ಈ ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗಗಳು ಹೆಚ್ಚು ಬಾಧಿತವಾಗಿವೆ.</p>.<p>ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಅಧಿಕಾರಿಗಳ ಸಭೆ ನಡೆಸಿ, ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಸೂಚಿಸಿದರು.</p>.<p>ಮಳೆಯಿಂದ ಆಗಿರುವ ಹಾನಿ ಕುರಿತು ತ್ವರಿತವಾಗಿ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಕಂದಾಯ, ಕೃಷಿ ಇಲಾಖೆಗಳಿಗೆ ನಿರ್ದೇಶನ ನೀಡಿದರು.</p>.<p>ಅಗ್ನಿ ಶಾಮಕ ದಳ ಹಾಗೂ ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ (ಆರ್ಡಿಎಂಸಿ) ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.</p>.<p>ಮಳೆ ಹಾಗೂ ಪ್ರವಾಹ ಕಾರಣದಿಂದ ಆಗಿರುವ ಅವಘಡಗಳಲ್ಲಿ ಕನಿಷ್ಠ 13 ಜನರು ಮೃತಪಟ್ಟಿದ್ದರೆ, ರಾಜ್ಯದ ವಿವಿಧ ಭಾಗಗಳಲ್ಲಿ ತೊಂದರೆಗೆ ಸಿಲುಕಿದ್ದ 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>17 ಜನರ ರಕ್ಷಣೆ: ನವಿ ಮುಂಬೈ ಬಳಿಯ ಪಾಂಡವಕಡಾ ಜಲಪಾತದ ಬಳಿ ಸಿಲುಕಿದ್ದ 17 ಜನ ಪ್ರವಾಸಿಗರನ್ನು ರಕ್ಷಿಸಲಾಗಿದೆ.</p>.<p>ಪಾಲ್ಘರ್ ಹಾಗೂ ಠಾಣೆ ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಬುಧವಾರ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಲ್ಘರ್, ಭಿವಂಡಿ, ಕಲ್ಯಾಣ್, ಉಲ್ಹಾಸ್ನಗರದಲ್ಲಿ ಭಾರಿ ಹಾನಿಯಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಮರಾಠವಾಡದಲ್ಲಿ ಭಾರಿ ಮಳೆ ಬೀಳುತ್ತಿರುವ ಕಾರಣ ಗೋದಾವರಿ ನದಿಗೆ ನಿರ್ಮಿಸಿರುವ ಜಾಯಕವಾಡಿ ಅಣೆಕಟ್ಟೆಗೆ ಒಳಹರಿವು ಹೆಚ್ಚಿದೆ. ಬುಧವಾರ 18 ಗೇಟ್ಗಳ ಮೂಲಕ 66,000 ಕ್ಯುಸೆಕ್ನಷ್ಟು ನೀರನ್ನು ನದಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p><strong>ವಾಯುಪಡೆ ತಂಡದಿಂದ ಮೂವರ ರಕ್ಷಣೆ:</strong> ಮಾಂಜರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಟ್ಟ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಲಾತೂರ್ ಜಿಲ್ಲೆಯ ರೇಣಾಪುರ ತಾಲ್ಲೂಕಿನ ಪೊಹರೆಗಾಂವ ಗ್ರಾಮದ ಮೂವರು ಪ್ರವಾಹದಲ್ಲಿ ಸಿಲುಕಿದ್ದರು. ವಾಯುಪಡೆಯ ಹೆಲಿಕಾಪ್ಟರ್ನ ನೆರವಿನಿಂದ ಈ ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>