ಕಾಂಗ್ರೆಸ್ ಕೂಡಾ ಇಂಥದ್ದೇ ಅಭಿಪ್ರಾಯವನ್ನು ಹೊರಹಾಕಿದೆ. ‘ಶಿಂದೆ–ಫಡಣವೀಸ್ ನೇತೃತ್ವದ ಸರ್ಕಾರವು ಕಾನೂನು ಸಮ್ಮತವಾಗಿದೆಯೇ ಎಂಬುದನ್ನು ಸುಪ್ರೀಂ ಕೋರ್ಟ್ ಪರಿಶೀಲಿಸುತ್ತಿದೆ. ಸದ್ಯದ ಸರ್ಕಾರವಷ್ಟೇ ಅಲ್ಲ, ಸರ್ಕಾರವನ್ನು ಮುನ್ನಡೆಸುತ್ತಿರುವ ವ್ಯಕ್ತಿಯೂ ಅನರ್ಹಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಆ ವೇದಿಕೆಯೇ ಅಸಂಬದ್ಧವಾಗಿ ಕಾಣುತ್ತಿತ್ತು’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಚಿನ್ ಸಾವಂತ್ ಹೇಳಿದ್ದಾರೆ.