ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌‌‘ಮಹಾ’ಬಂಡಾಯ: ಏಕನಾಥ್ ಶಿಂಧೆ ಖಾತೆ ಹಿಂಪಡೆದ ಸಿಎಂ ಉದ್ಧವ್ ಠಾಕ್ರೆ

Last Updated 27 ಜೂನ್ 2022, 9:00 IST
ಅಕ್ಷರ ಗಾತ್ರ

ಮುಂಬೈ: ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡೆದ್ದಿರುವ ಸಚಿವರ ವಿರುದ್ಧ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮೊದಲ ಕ್ರಮ ಕೈಗೊಂಡಿದ್ದಾರೆ.

ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಮತ್ತು ಇತರ ಸಚಿವರ ಖಾತೆಗಳನ್ನು ಹಿಂಪಡೆದಿರುವ ಉದ್ಧವ್, ಮಂತ್ರಿ ಪರಿಷತ್ತಿನ ಇತರೆ ಸಚಿವರಿಗೆ ಹಂಚಿಕೆ ಮಾಡಿದ್ದಾರೆ.

ಶಿಂಧೆ ಅವರ ನಗರಾಭಿವೃದ್ಧಿ ಮತ್ತು ಸಾರ್ವಜನಿಕ ಕಾರ್ಯಗಳ ಖಾತೆಯನ್ನು ಶಿವಸೇನೆಯ ಹಿರಿಯ ಮುಖಂಡ ಸುಭಾಷ್ ದೇಸಾಯಿ ಅವರಿಗೆ ಹಂಚಿಕೆ ಮಾಡಲಾಗಿದೆ. ಗುಲಾಬ್ ರಾವ್ ಪಾಟೀಲ್ ಅವರ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆಯನ್ನು ಅನಿಲ್ ಪರಬ್ ಅವರಿಗೆ ಹಸ್ತಾಂತರಿಸಲಾಗಿದೆ.

ಏಕನಾಥ್ ಶಿಂಧೆ ಮತ್ತು ಗುಲಾಬ್ ರಾವ್ ಅವರು ಈಗ ಖಾತೆ ಇಲ್ಲದ ಸಚಿವರಾಗಿದ್ದಾರೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT