ಕಳೆದ 7 ತಿಂಗಳಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 15 ಲಕ್ಷ ದಾಟಿದ್ದರೆ, 40 ಸಾವಿರ ಮಂದಿ ಮೃತಪಟ್ಟಿದ್ದಾರೆ. 12.5 ಲಕ್ಷ ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.ಗರಿಷ್ಠ ಪ್ರಕರಣಗಳು ವರದಿಯಾಗಿದ್ದ ಮುಂಬೈ ಮತ್ತು ಪುಣೆ ನಗರಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಸಂಪೂರ್ಣವಾಗಿ ಕೊನೆಗೊಳಿಸಿ ಅಗತ್ಯ ನಿಯಮಾವಳಿಗಳನ್ನು ಉಳಿಸಿಕೊಳ್ಳಲು ಸರ್ಕಾರ ಚಿಂತಿಸಿದ್ದು,ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೆಲವೇ ದಿನಗಳಲ್ಲಿ ಸರಣಿ ಸಭೆಗಳನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.