ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮಹಾ' ಬಿಕ್ಕಟ್ಟು | ಮತ್ತೆ ನಾಲ್ವರು ಬಂಡಾಯ ಶಾಸಕರ ಅನರ್ಹತೆ ಕೋರಿದ ಶಿವಸೇನಾ

Last Updated 25 ಜೂನ್ 2022, 2:14 IST
ಅಕ್ಷರ ಗಾತ್ರ

ಮುಂಬೈ: ಬಂಡಾಯ ಎದ್ದಿರುವ ಶಿವಸೇನಾದ ಮತ್ತೆ ನಾಲ್ವರು ಶಾಸಕರನ್ನು ಅನರ್ಹಗೊಳಿಸುವ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರದ ವಿಧಾನಸಭೆ ಉಪ ಸ್ಪೀಕರ್‌ಗೆ ಮನವಿ ಸಲ್ಲಿಸಲಾಗಿದೆ ಎಂದು ಸಂಸದ, ಶಿವಸೇನಾದ ನಾಯಕ ಅರವಿಂದ ಸಾವಂತ್ ತಿಳಿಸಿದ್ದಾರೆ.

ಬಂಡಾಯ ಗುಂಪಿನ 16 ಶಾಸಕರಿಗೆ ನೋಟಿಸ್ ಜಾರಿ ಮಾಡಲಿದ್ದು, ಸೋಮವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ತಿಳಿಸಲಾಗಿದೆ ಎಂದು ಸಾವಂತ್ ತಿಳಿಸಿದರು.

ಶಿವಸೇನಾದ ಬಂಡಾಯ ನಾಯಕ ಏಕನಾಥ ಶಿಂಧೆ ಅವರೊಂದಿಗೆ ಗುರುತಿಸಿಕೊಂಡಿರುವ ಸುಮಾರು 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಮತ್ತೆ ನಾಲ್ವರು ಶಾಸಕರಾದ ಸಂಜಯ್ ರೇಮುಲ್ಕರ್, ಚಿಮನ್ ಪಾಟೀಲ್, ರಮೇಶ್ ಬೊರ್ನಾರೆ ಮತ್ತು ಬಾಲಾಜಿ ಕಲ್ಯಾಣ್ಕರ್ ಹೆಸರುಗಳನ್ನು ಉಪ ಸ್ಪೀಕರ್‌ಗೆ ಸಲ್ಲಿಸಲಾಗಿದೆಎಂದು ಅವರು ಹೇಳಿದರು.

ಪತ್ರ ರವಾನಿಸಿದರೂ ಪಕ್ಷದ ಶಾಸಕಾಂಗ ಸಭೆಯಲ್ಲಿ ಅವರು ಯಾರೂ ಭಾಗವಹಿಸಲಿಲ್ಲ ಎಂದು ಸಾವಂತ್ ಹೇಳಿದರು.

ಈಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾತ್ರ ಬಂಡಾಯ ಶಾಸಕರು ಶಿವಸೇನಾಗೆ ಮರಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು. ಇಲ್ಲವಾದ್ದಲ್ಲಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಲ್ಪಡುತ್ತದೆ. ಅವರೆಲ್ಲರೂ ಕೇಸರಿ ಧ್ವಜಕ್ಕೆ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿದರು.

ಈ ನಡುವೆ ನೋಟಿಸ್ ಸಿಕ್ಕಿದ ತಕ್ಷಣ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಬಂಡಾಯ ಶಾಸಕರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT