ಠಾಣೆ: ಶಿವಸೇನಾ ಬಂಡಾಯ ಶಾಸಕ ಏಕನಾಥ ಶಿಂಧೆ ಅವರನ್ನು ಬೆಂಬಲಿಸಿದ ಮಹಾರಾಷ್ಟ್ರದ ಠಾಣೆಯ ಮೂವರು ನಾಯಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಠಾಣೆಯ ಮಾಜಿ ಮೇಯರ್ ಹಾಗೂ ಶಿವಸೇನಾ ಜಿಲ್ಲಾ ಸಂಚಾಲಕಿ ಮೀನಾಕ್ಷಿ ಶಿಂಧೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ನಿರ್ದೇಶನದ ಮೇರೆಗೆ ಮೀನಾಕ್ಷಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆ ಮಂಗಳವಾರ ತಿಳಿಸಿದೆ.
ಇದಕ್ಕೂ ಮುನ್ನ ಠಾಣೆಯ ಮಾಜಿ ಮೇಯರ್ ನರೇಶ್ ಮಾಸ್ಕೆನ್ ಹಾಗೂ ಸಂಚಾಲಕ ರಾಹುಲ್ ಲೋಂಡೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇವರೆಲ್ಲ ಶಿಂಧೆ ಅವರಿಗೆ ಬೆಂಬಲ ಸೂಚಿಸಿದ್ದರು.
ಶಿವಸೇನಾದ ದೊಂಬಿವಿಲಿ ಕಚೇರಿಯಿಂದ ಏಕನಾಥ ಶಿಂಧೆ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಭಾವಚಿತ್ರವನ್ನು ತೆರವುಗೊಳಿಸಲಾಗಿದೆ.
ಈ ಮಧ್ಯೆ, ಎಲ್ಲರೂ ಗುವಾಹಟಿಯಿಂದ ಮುಂಬೈಗೆ ಮರಳಿ ಬನ್ನಿ. ಜತೆಯಾಗಿ ಕುಳಿತುಕೊಂಡು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸೋಣ ಎಂದು ಬಂಡಾಯ ಶಾಸಕರಿಗೆ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.