ಸದ್ಯ, ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಶಾಸಕರು ಅಸ್ಸಾಂನ ಗುವಾಹಟಿಯ ಐಷಾರಾಮಿ ಹೋಟೆಲ್ನಲ್ಲಿ ತಂಗಿದ್ದಾರೆ. ಉಭಯ ಬಣಗಳ ನಡುವೆ ಕಳೆದ ಕೆಲವು ದಿನಗಳಿಂದ ವಾಕ್ಸಮರವೂ ತೀವ್ರಗೊಂಡಿತ್ತು. ಇಂದು (ಮಂಗಳವಾರ) ಬೆಳಿಗ್ಗೆ ಉದ್ಧವ್ ಅವರನ್ನು ಉದ್ದೇಶಿಸಿ ಸಂದೇಶ ಬಿಡುಗಡೆ ಮಾಡಿದ್ದ ಶಿಂಧೆ, ನಿಮ್ಮ ಸಂಪರ್ಕದಲ್ಲಿರುವ ಒಬ್ಬ ಬಂಡಾಯ ಶಾಸಕನನ್ನು ಹೆಸರಿಸಿ ಎಂದು ಸವಾಲೆಸೆದಿದ್ದರು.