<p><strong>ಬೆಳಗಾವಿ:</strong> ‘ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು’ ಎಂದು ಆ ರಾಜ್ಯದ ಉಪಮುಖ್ಯಮಂತ್ರಿಯೂ ಆಗಿರುವ ಎನ್ಸಿಪಿ ನಾಯಕ ಅಜಿತ್ ಪವಾರ್ ಹೇಳಿದ್ದಾರೆ.</p>.<p>ಮುಂಬೈನಲ್ಲಿ ಮಂಗಳವಾರ ನಡೆದ ಶಿವಸೇನೆ ನಾಯಕ ದಿ.ಬಾಳಾಠಾಕ್ರೆ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮರಾಠಿ ಮಾತನಾಡುವವರು ಹೆಚ್ಚಾಗಿರುವ ಈ ಪ್ರದೇಶಗಳನ್ನು ಸೇರಿದ ಅಖಂಡ ಮಹಾರಾಷ್ಟ್ರದ ಅಭಿವೃದ್ಧಿ ಬಾಳಾ ಠಾಕ್ರೆ ಕನಸಾಗಿತ್ತು. ಅದನ್ನು ನನಸು ಮಾಡಬೇಕಿದೆ’ ಎಂದಿದ್ದಾರೆ.</p>.<p>ಅವರ ಈ ಹೇಳಿಕೆಗೆ ಬೆಳಗಾವಿಯಲ್ಲಿ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.</p>.<p class="Subhead">ಬೆಲೆ ಕೊಡಬೇಕಿಲ್ಲ: ಬುಧವಾರಪತ್ರಕರ್ತರೊಂದಿಗೆ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ‘ಮಹಾರಾಷ್ಟ್ರದವರ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ರಾಜಕೀಯ ದುರುದ್ದೇಶದಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಅದಕ್ಕೆ ಬೆಲೆ ಕೊಡಬೇಕಿಲ್ಲ’ ಎಂದು ಹೇಳಿದರು.</p>.<p>ಗಡಿ ಉಸ್ತುವಾರಿ ಸಚಿವರ ನೇಮಕದ ಪ್ರಶ್ನೆಗೆ, ‘ಜಿಲ್ಲೆಯವರೇ ನಾಲ್ವರು ಸಚಿವರಿದ್ದಾರೆ. ಈ ವಿಷಯದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀರ್ಮಾನ ಕೈಗೊಳ್ಳುತ್ತಾರೆ’ ಎಂದರು.</p>.<p>ನಿಪ್ಪಾಣಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ‘ಕರ್ನಾಟಕದ ಯಾವುದೇ ಭಾಗವನ್ನೂ ಅವರಿಗೆ ಬಿಟ್ಟು ಕೊಡಲು ತಯಾರಿಲ್ಲ. ಮಹಾರಾಷ್ಟ್ರದವರ ಹೇಳಿಕೆಯಿಂದ ನಮ್ಮ– ನಮ್ಮಲ್ಲಿ ಜಗಳ ಆಗಬಾರದು’ ಎಂದರು.</p>.<p class="Subhead">ಅವರಪ್ಪನದಲ್ಲ: ‘ಕರ್ನಾಟಕ ಉಸ್ಕಾ ಬಾಪ್ ಕಾ ನಹೀ... ಏ ಹಮಾರಾ ಹೈ (ಕರ್ನಾಟಕ ಅವರಪ್ಪನದಲ್ಲ, ಇದು ನಮ್ಮದು)’ ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು’ ಎಂದು ಆ ರಾಜ್ಯದ ಉಪಮುಖ್ಯಮಂತ್ರಿಯೂ ಆಗಿರುವ ಎನ್ಸಿಪಿ ನಾಯಕ ಅಜಿತ್ ಪವಾರ್ ಹೇಳಿದ್ದಾರೆ.</p>.<p>ಮುಂಬೈನಲ್ಲಿ ಮಂಗಳವಾರ ನಡೆದ ಶಿವಸೇನೆ ನಾಯಕ ದಿ.ಬಾಳಾಠಾಕ್ರೆ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮರಾಠಿ ಮಾತನಾಡುವವರು ಹೆಚ್ಚಾಗಿರುವ ಈ ಪ್ರದೇಶಗಳನ್ನು ಸೇರಿದ ಅಖಂಡ ಮಹಾರಾಷ್ಟ್ರದ ಅಭಿವೃದ್ಧಿ ಬಾಳಾ ಠಾಕ್ರೆ ಕನಸಾಗಿತ್ತು. ಅದನ್ನು ನನಸು ಮಾಡಬೇಕಿದೆ’ ಎಂದಿದ್ದಾರೆ.</p>.<p>ಅವರ ಈ ಹೇಳಿಕೆಗೆ ಬೆಳಗಾವಿಯಲ್ಲಿ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.</p>.<p class="Subhead">ಬೆಲೆ ಕೊಡಬೇಕಿಲ್ಲ: ಬುಧವಾರಪತ್ರಕರ್ತರೊಂದಿಗೆ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ‘ಮಹಾರಾಷ್ಟ್ರದವರ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ರಾಜಕೀಯ ದುರುದ್ದೇಶದಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಅದಕ್ಕೆ ಬೆಲೆ ಕೊಡಬೇಕಿಲ್ಲ’ ಎಂದು ಹೇಳಿದರು.</p>.<p>ಗಡಿ ಉಸ್ತುವಾರಿ ಸಚಿವರ ನೇಮಕದ ಪ್ರಶ್ನೆಗೆ, ‘ಜಿಲ್ಲೆಯವರೇ ನಾಲ್ವರು ಸಚಿವರಿದ್ದಾರೆ. ಈ ವಿಷಯದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀರ್ಮಾನ ಕೈಗೊಳ್ಳುತ್ತಾರೆ’ ಎಂದರು.</p>.<p>ನಿಪ್ಪಾಣಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ‘ಕರ್ನಾಟಕದ ಯಾವುದೇ ಭಾಗವನ್ನೂ ಅವರಿಗೆ ಬಿಟ್ಟು ಕೊಡಲು ತಯಾರಿಲ್ಲ. ಮಹಾರಾಷ್ಟ್ರದವರ ಹೇಳಿಕೆಯಿಂದ ನಮ್ಮ– ನಮ್ಮಲ್ಲಿ ಜಗಳ ಆಗಬಾರದು’ ಎಂದರು.</p>.<p class="Subhead">ಅವರಪ್ಪನದಲ್ಲ: ‘ಕರ್ನಾಟಕ ಉಸ್ಕಾ ಬಾಪ್ ಕಾ ನಹೀ... ಏ ಹಮಾರಾ ಹೈ (ಕರ್ನಾಟಕ ಅವರಪ್ಪನದಲ್ಲ, ಇದು ನಮ್ಮದು)’ ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>