ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರದ್ದು: ಅಜಿತ್ ಪವಾರ್‌

Last Updated 18 ನವೆಂಬರ್ 2020, 21:22 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು’ ಎಂದು ಆ ರಾಜ್ಯದ ಉಪಮುಖ್ಯಮಂತ್ರಿಯೂ ಆಗಿರುವ ಎನ್‌ಸಿಪಿ ನಾಯಕ ಅಜಿತ್ ಪವಾರ್‌ ಹೇಳಿದ್ದಾರೆ.

ಮುಂಬೈನಲ್ಲಿ ಮಂಗಳವಾರ ನಡೆದ ಶಿವಸೇನೆ ನಾಯಕ ದಿ.ಬಾಳಾಠಾಕ್ರೆ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮರಾಠಿ ಮಾತನಾಡುವವರು ಹೆಚ್ಚಾಗಿರುವ ಈ ಪ್ರದೇಶಗಳನ್ನು ಸೇರಿದ ಅಖಂಡ ಮಹಾರಾಷ್ಟ್ರದ ಅಭಿವೃದ್ಧಿ ಬಾಳಾ ಠಾಕ್ರೆ ಕನಸಾಗಿತ್ತು. ಅದನ್ನು ನನಸು ಮಾಡಬೇಕಿದೆ’ ಎಂದಿದ್ದಾರೆ.

ಅವರ ಈ ಹೇಳಿಕೆಗೆ ಬೆಳಗಾವಿಯಲ್ಲಿ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಲೆ ಕೊಡಬೇಕಿಲ್ಲ: ಬುಧವಾರಪತ್ರಕರ್ತರೊಂದಿಗೆ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ‘ಮಹಾರಾಷ್ಟ್ರದವರ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ರಾಜಕೀಯ ದುರುದ್ದೇಶದಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಅದಕ್ಕೆ ಬೆಲೆ ಕೊಡಬೇಕಿಲ್ಲ’ ಎಂದು ಹೇಳಿದರು.

ಗಡಿ ಉಸ್ತುವಾರಿ ಸಚಿವರ ನೇಮಕದ ಪ್ರಶ್ನೆಗೆ, ‘ಜಿಲ್ಲೆಯವರೇ ನಾಲ್ವರು ಸಚಿವರಿದ್ದಾರೆ. ಈ ವಿಷಯದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀರ್ಮಾನ ಕೈಗೊಳ್ಳುತ್ತಾರೆ’ ಎಂದರು.

ನಿಪ್ಪಾಣಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ‘ಕರ್ನಾಟಕದ ಯಾವುದೇ ಭಾಗವನ್ನೂ ಅವರಿಗೆ ಬಿಟ್ಟು ಕೊಡಲು ತಯಾರಿಲ್ಲ. ಮಹಾರಾಷ್ಟ್ರದವರ ಹೇಳಿಕೆಯಿಂದ ನಮ್ಮ– ನಮ್ಮಲ್ಲಿ ಜಗಳ ಆಗಬಾರದು’ ಎಂದರು.

ಅವರಪ್ಪನದಲ್ಲ: ‘ಕರ್ನಾಟಕ ಉಸ್ಕಾ ಬಾಪ್ ಕಾ ನಹೀ... ಏ ಹಮಾರಾ ಹೈ (ಕರ್ನಾಟಕ ಅವರಪ್ಪನದಲ್ಲ, ಇದು ನಮ್ಮದು)’ ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT