‘ಪಾಲಿಕೆ ಚುನಾವಣೆಯಲ್ಲಿ ನಿಮ್ಮ ಪಕ್ಷ ಗೆದ್ದರೂ ಪರವಾಗಿಲ್ಲ, ಆದರೆ, ನೀವು ಮರಾಠಿ ಅಭ್ಯರ್ಥಿಗಳ ಸೋಲಿಗೆ ಖುಷಿಪಡುತ್ತಿದ್ದೀರಿ. ನಿಮಗೆ ನಾಚಿಕೆಯಾಗುತ್ತಿಲ್ಲವೇ?‘ ಎಂದು ಪ್ರಶ್ನಿಸಿದರು. ‘ಇಂಥ ದ್ರೋಹವನ್ನು ನಾನು ಹಿಂದೆಂದೂ ನೋಡಿಲ್ಲ‘ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಬೆಳಗಾವಿಯಲ್ಲಿ ಮರಾಠಿಯ ಆತ್ಮಾಭಿಮಾನ ಮತ್ತು ಸ್ವಾಭಿಮಾನಕ್ಕಾಗಿ ಲಕ್ಷಾಂತರ ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ‘ ಎಂದು ನೆನಪಿಸಿದರು.