ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ ಕಡಲ ಭದ್ರತಾ ಪಡೆ ಗುಂಡಿನ ದಾಳಿಗೆ ಮಹಾರಾಷ್ಟ್ರದ ಮೀನುಗಾರ ಸಾವು

Last Updated 7 ನವೆಂಬರ್ 2021, 15:37 IST
ಅಕ್ಷರ ಗಾತ್ರ

ದೇವಭೂಮಿ– ದ್ವಾರಕಾ (ಗುಜರಾತ್‌):ಗುಜರಾತ್‌ ಕರಾವಳಿ ತೀರದಲ್ಲಿ ಪಾಕಿಸ್ತಾನ ಕಡಲ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಮಹಾರಾಷ್ಟ್ರದ ಮೀನುಗಾರರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಮೀನುಗಾರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಸಂಜೆ 4 ಗಂಟೆಗೆ ‘ಜಲಪರಿ’ ದೋಣಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ದೋಣಿಯಲ್ಲಿ ಗುಜರಾತಿನ ಐವರು ಹಾಗೂ ಮಹಾರಾಷ್ಟ್ರದ ಇಬ್ಬರು ಮೀನುಗಾರರಿದ್ದರು. ಅದರಲ್ಲಿ ಒಬ್ಬ ಮೀನುಗಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಸುನೀಲ್‌ ಜೋಷಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT