ಬುಧವಾರದವರೆಗಿನ ಮಾಹಿತಿ ಪ್ರಕಾರ, ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹ, ಭೂಕುಸಿತದಲ್ಲಿ ಸತ್ತವರ ಸಂಖ್ಯೆ 213. ರಾಯಗಡ ಜಿಲ್ಲೆ ಒಂದರಲ್ಲೇ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಅನಾರೋಗ್ಯಕ್ಕೆ ಒಳಗಾಗಿರುವವರಿಗೆ ವೈದ್ಯಕೀಯ ತಂಡಗಳು ಚಿಕಿತ್ಸೆ ನೀಡಲಿವೆ.