ಮುಂಬೈ: ಛತ್ರಪತಿ ಶಿವಾಜಿ ಕುರಿತು ವಿವಾದಿತ ಹೇಳಿಕೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ತಕ್ಷಣ ವಾಪಾಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿರುವ ಶಿವಸೇನಾ ನಾಯಕ ಉದ್ಧವ್ ಠಾಕ್ರೆ, ಕೋಶಿಯಾರಿ ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ಅಮೆಜಾನ್ನಿಂದ ಕಳುಹಿಸಿರುವ ಪಾರ್ಸೆಲ್ ಎಂದು ಲೇವಡಿ ಮಾಡಿದ್ದಾರೆ.