<p><strong>ಮುಂಬೈ:</strong> 12ನೇ ಶತಮಾನದ ದಾರ್ಶನಿಕ, ವಚನಕಾರ ಬಸವೇಶ್ವರರ ಬೃಹತ್ ಸ್ಮಾರಕವನ್ನು ಸೊಲ್ಲಾಪುರ ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.</p>.<p>ಕರ್ನಾಟಕ ಗಡಿಯ ಸೊಲ್ಲಾಪುರ ಜಿಲ್ಲೆಯು ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದವರನ್ನು ಒಳಗೊಂಡಿದೆ. ಧಾರ್ಮಿಕ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಜಿಲ್ಲೆಯಲ್ಲಿ ಮರಾಠಿ, ತೆಲುಗು ಮತ್ತು ಕನ್ನಡ ಭಾಷಿಕರಿದ್ದು, ಹಲವು ಸಂಸ್ಕೃತಿಗಳ ಸಂಗಮ ಸ್ಥಾನವಾಗಿದೆ.</p>.<p>ಉದ್ಧವ್ ಠಾಕ್ರೆ ನೇತೃತ್ವದ 'ಮಹಾ ವಿಕಾಸ್ ಅಘಾಡಿ' ಮೈತ್ರಿ ಸರ್ಕಾರವು ಸೊಲ್ಲಾಪುರದ ಮಂಗಳವೇಡಾ ಪ್ರದೇಶದಲ್ಲಿ ಈ ಸ್ಮಾರಕ ನಿರ್ಮಿಸಲು ಮುಂದಾಗಿದೆ. ಸೋಮವಾರ 2021-22ನೇ ಸಾಲಿನ ಬಜೆಟ್ ಮಂಡನೆ ವೇಳೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/something-fishy-maharashtra-cm-uddhav-thackeray-on-nia-taking-over-mukesh-ambani-bomb-scare-probe-811796.html" itemprop="url">ಅಂಬಾನಿ ಮನೆ ಬಳಿ ಸ್ಕಾರ್ಪಿಯೊ ಪತ್ತೆ ಪ್ರಕರಣ ಎನ್ಐಎಗೆ: ಏನೋ ಅಡಗಿದೆ ಎಂದ ಠಾಕ್ರೆ</a></p>.<p>‘ಸಂತ ಬಸವೇಶ್ವರರು ಸೊಲ್ಲಾಪುರ ಜಿಲ್ಲೆಯ ಮಂಗಳವೇಡಾದಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ನೆಲೆಸಿದ್ದರು. ಅವರು ಜನರಿಗೆ ಸಮಾನತೆ, ಕಾಯಕ ಮತ್ತು ನೈತಿಕ ಜೀವನದ ಮಹತ್ವವನ್ನು ಬೋಧಿಸಿದವರು. ಅವರ ನೆನಪಿನಲ್ಲಿ ಸ್ಮಾರಕ ನಿರ್ಮಿಸಲು ಅಗತ್ಯವಿರುವ ಅನುದಾನ ನೀಡಲಾಗುವುದು’ ಎಂದು ಅಜಿತ್ ಪವಾರ್ ಹೇಳಿದ್ದಾರೆ.</p>.<p>ಮಂಗಳವೇಡಾವು ‘ಸಂತರ ನಾಡು’ ಎಂದೇ ಪ್ರಸಿದ್ಧವಾಗಿದೆ. ಇಲ್ಲಿ ಸಂತ ಜಯತೀರ್ಥ, ಸಂತ ದಾಮಾಜಿ, ಸಂತ ಕನ್ಹೋಪಾತ್ರ, ಸಂತ ಬಸವೇಶ್ವರ ವಾಸವಿದ್ದರು.</p>.<p><strong>ಓದಿ:</strong><a href="https://www.prajavani.net/india-news/lockdown-in-11-hotspots-in-thane-city-from-march-13-to-31-as-covid-19-cases-rise-811809.html" itemprop="url">ಕೋವಿಡ್–19 ಹೆಚ್ಚಳ: ಠಾಣೆ ನಗರದ 11 ಕಡೆ ಮಾ. 13ರಿಂದ 31ರವರೆಗೆ ಲಾಕ್ಡೌನ್</a></p>.<p>ಸೊಲ್ಲಾಪುರ ಜಿಲ್ಲಾ ಕೇಂದ್ರದಿಂದ 55 ಕಿಲೋಮೀಟರ್ ಪಶ್ಚಿಮಕ್ಕೆ ಮತ್ತು ಪಂಢರಪುರದಿಂದ ಆಗ್ನೇಯಕ್ಕೆ 25 ಕಿಲೋಮೀಟರ್ ದೂರದಲ್ಲಿ ಮಂಗಳವೇಡಾ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> 12ನೇ ಶತಮಾನದ ದಾರ್ಶನಿಕ, ವಚನಕಾರ ಬಸವೇಶ್ವರರ ಬೃಹತ್ ಸ್ಮಾರಕವನ್ನು ಸೊಲ್ಲಾಪುರ ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.</p>.<p>ಕರ್ನಾಟಕ ಗಡಿಯ ಸೊಲ್ಲಾಪುರ ಜಿಲ್ಲೆಯು ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದವರನ್ನು ಒಳಗೊಂಡಿದೆ. ಧಾರ್ಮಿಕ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಜಿಲ್ಲೆಯಲ್ಲಿ ಮರಾಠಿ, ತೆಲುಗು ಮತ್ತು ಕನ್ನಡ ಭಾಷಿಕರಿದ್ದು, ಹಲವು ಸಂಸ್ಕೃತಿಗಳ ಸಂಗಮ ಸ್ಥಾನವಾಗಿದೆ.</p>.<p>ಉದ್ಧವ್ ಠಾಕ್ರೆ ನೇತೃತ್ವದ 'ಮಹಾ ವಿಕಾಸ್ ಅಘಾಡಿ' ಮೈತ್ರಿ ಸರ್ಕಾರವು ಸೊಲ್ಲಾಪುರದ ಮಂಗಳವೇಡಾ ಪ್ರದೇಶದಲ್ಲಿ ಈ ಸ್ಮಾರಕ ನಿರ್ಮಿಸಲು ಮುಂದಾಗಿದೆ. ಸೋಮವಾರ 2021-22ನೇ ಸಾಲಿನ ಬಜೆಟ್ ಮಂಡನೆ ವೇಳೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/something-fishy-maharashtra-cm-uddhav-thackeray-on-nia-taking-over-mukesh-ambani-bomb-scare-probe-811796.html" itemprop="url">ಅಂಬಾನಿ ಮನೆ ಬಳಿ ಸ್ಕಾರ್ಪಿಯೊ ಪತ್ತೆ ಪ್ರಕರಣ ಎನ್ಐಎಗೆ: ಏನೋ ಅಡಗಿದೆ ಎಂದ ಠಾಕ್ರೆ</a></p>.<p>‘ಸಂತ ಬಸವೇಶ್ವರರು ಸೊಲ್ಲಾಪುರ ಜಿಲ್ಲೆಯ ಮಂಗಳವೇಡಾದಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ನೆಲೆಸಿದ್ದರು. ಅವರು ಜನರಿಗೆ ಸಮಾನತೆ, ಕಾಯಕ ಮತ್ತು ನೈತಿಕ ಜೀವನದ ಮಹತ್ವವನ್ನು ಬೋಧಿಸಿದವರು. ಅವರ ನೆನಪಿನಲ್ಲಿ ಸ್ಮಾರಕ ನಿರ್ಮಿಸಲು ಅಗತ್ಯವಿರುವ ಅನುದಾನ ನೀಡಲಾಗುವುದು’ ಎಂದು ಅಜಿತ್ ಪವಾರ್ ಹೇಳಿದ್ದಾರೆ.</p>.<p>ಮಂಗಳವೇಡಾವು ‘ಸಂತರ ನಾಡು’ ಎಂದೇ ಪ್ರಸಿದ್ಧವಾಗಿದೆ. ಇಲ್ಲಿ ಸಂತ ಜಯತೀರ್ಥ, ಸಂತ ದಾಮಾಜಿ, ಸಂತ ಕನ್ಹೋಪಾತ್ರ, ಸಂತ ಬಸವೇಶ್ವರ ವಾಸವಿದ್ದರು.</p>.<p><strong>ಓದಿ:</strong><a href="https://www.prajavani.net/india-news/lockdown-in-11-hotspots-in-thane-city-from-march-13-to-31-as-covid-19-cases-rise-811809.html" itemprop="url">ಕೋವಿಡ್–19 ಹೆಚ್ಚಳ: ಠಾಣೆ ನಗರದ 11 ಕಡೆ ಮಾ. 13ರಿಂದ 31ರವರೆಗೆ ಲಾಕ್ಡೌನ್</a></p>.<p>ಸೊಲ್ಲಾಪುರ ಜಿಲ್ಲಾ ಕೇಂದ್ರದಿಂದ 55 ಕಿಲೋಮೀಟರ್ ಪಶ್ಚಿಮಕ್ಕೆ ಮತ್ತು ಪಂಢರಪುರದಿಂದ ಆಗ್ನೇಯಕ್ಕೆ 25 ಕಿಲೋಮೀಟರ್ ದೂರದಲ್ಲಿ ಮಂಗಳವೇಡಾ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>