ಗೋವಾದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಿಂಧೆ, ವಿಶ್ವಾಸ ತುಂಬಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದವನ್ನು ತಿಳಿಸಿದರು. ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಗೋವಾಗೆ ಮರಳಿದ ಶಿಂಧೆ ಅವರು ಉದ್ಧವ್ ಠಾಕ್ರೆ ವಿರುದ್ಧ ತನ್ನ ಜೊತೆ ಬಂಡಾಯ ಎದ್ದಿದ್ದ ಶಾಸಕರನ್ನು ಭೇಟಿ ಮಾಡಿದರು.