ಅಗತ್ಯ ಸೇವೆ ವ್ಯಾಪ್ತಿಯಲ್ಲಿ ಒಳಪಡದವರು ಸೂಕ್ತ ಕಾರಣವಿಲ್ಲದೆ ಸಂಚರಿಸುವುದಕ್ಕೆ ಅನುಮತಿ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
‘ನಾವು ಕಠಿಣ ಕ್ರಮ ಕೈಗೊಳ್ಳಬೇಕಿದೆ. ಜನರ ಜೀವಗಳನ್ನು ಉಳಿಸಬೇಕಿದೆ. ನಾವಿದನ್ನು ನಿರ್ಬಂಧವೆಂದೋ ಲಾಕ್ಡೌನ್ ಎಂದೋ ಏನೆಂದು ಕರೆಯುತ್ತೇವೆ ಎಂಬುದು ಮುಖ್ಯವಲ್ಲ. ಕೊರೊನಾ ಓಡಿಸುವ ಕಾರ್ಯಾಚರಣೆ ಹಮ್ಮಿಕೊಳ್ಳೋಣ. ನಾವು ಸಾಂಕ್ರಾಮಿಕದ ವಿರುದ್ಧ ಹೋರಾಡಬೇಕಿದೆ. ಇದಕ್ಕೆ ಏನು ಅಗತ್ಯವಿದೆಯೋ ಅದನ್ನು ಮಾಡಬೇಕಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.