<p class="title"><strong>ಮುಂಬೈ:</strong> ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಹಾರಾಷ್ಟ್ರ ವಿಧಾನ ಪರಿಷತ್ತು ಶುಕ್ರವಾರ ಸರ್ವಾನುಮತದಿಂದ ಖಂಡನಾ ನಿರ್ಣಯವನ್ನು ಅಂಗೀಕರಿಸಿದೆ.</p>.<p class="title">ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವು ಇನ್ನು ಮುಂದೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೀಡಿರುವ ಹೇಳಿಕೆಯನ್ನು ವಿಧಾನ ಪರಿಷತ್ ಸದಸ್ಯರು ವಿರೋಧಿಸಿದ್ದಾರೆ.</p>.<p class="title">ಅಕ್ಕಲಕೋಟೆ ಮತ್ತು ಸೊಲ್ಲಾಪುರದಂತಹ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ನೀಡಲಾಯಿತು. ಆದ್ದರಿಂದ ಬೆಳಗಾವಿ, ಕಾರವಾರ ಮತ್ತು ನೆರೆಯ ಪ್ರದೇಶಗಳನ್ನು ಕರ್ನಾಟಕಕ್ಕೆ ನೀಡಲಾಗಿದೆ ಎಂದು ಬೊಮ್ಮಾಯಿ ಅವರು ನೀಡಿದ ಹೇಳಿಕೆಯನ್ನು ಶಿವಸೇನಾ ಶಾಸಕ ದಿವಾಕರ್ ರಾವುತೆ ಅವರು ವಿಧಾನ ಪರಿಷತ್ನಲ್ಲಿ ವಿಷಯ ಪ್ರಸ್ತಾಪಿಸಿದರು.</p>.<p class="title">ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಭಾಪತಿ ರಾಮರಾಜೇ ನಾಯ್ಕ್ –ನಿಂಬಾಳ್ಕರ್, ‘ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ಖಂಡಿಸುವ ಪ್ರಸ್ತಾವವನ್ನು ನಾನು ಮುಂದಿಡುತ್ತೇನೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ನಡೆಯುತ್ತಿದ್ದು, ಪ್ರಕರಣದ ಮೇಲೆ ಪ್ರಭಾವ ಬೀರುವ ಹೇಳಿಕೆ ನೀಡಬಾರದಿತ್ತು’ ಎಂದು ಹೇಳಿದರು.</p>.<p class="title">ಈ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಹಾರಾಷ್ಟ್ರ ವಿಧಾನ ಪರಿಷತ್ತು ಶುಕ್ರವಾರ ಸರ್ವಾನುಮತದಿಂದ ಖಂಡನಾ ನಿರ್ಣಯವನ್ನು ಅಂಗೀಕರಿಸಿದೆ.</p>.<p class="title">ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವು ಇನ್ನು ಮುಂದೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೀಡಿರುವ ಹೇಳಿಕೆಯನ್ನು ವಿಧಾನ ಪರಿಷತ್ ಸದಸ್ಯರು ವಿರೋಧಿಸಿದ್ದಾರೆ.</p>.<p class="title">ಅಕ್ಕಲಕೋಟೆ ಮತ್ತು ಸೊಲ್ಲಾಪುರದಂತಹ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ನೀಡಲಾಯಿತು. ಆದ್ದರಿಂದ ಬೆಳಗಾವಿ, ಕಾರವಾರ ಮತ್ತು ನೆರೆಯ ಪ್ರದೇಶಗಳನ್ನು ಕರ್ನಾಟಕಕ್ಕೆ ನೀಡಲಾಗಿದೆ ಎಂದು ಬೊಮ್ಮಾಯಿ ಅವರು ನೀಡಿದ ಹೇಳಿಕೆಯನ್ನು ಶಿವಸೇನಾ ಶಾಸಕ ದಿವಾಕರ್ ರಾವುತೆ ಅವರು ವಿಧಾನ ಪರಿಷತ್ನಲ್ಲಿ ವಿಷಯ ಪ್ರಸ್ತಾಪಿಸಿದರು.</p>.<p class="title">ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಭಾಪತಿ ರಾಮರಾಜೇ ನಾಯ್ಕ್ –ನಿಂಬಾಳ್ಕರ್, ‘ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ಖಂಡಿಸುವ ಪ್ರಸ್ತಾವವನ್ನು ನಾನು ಮುಂದಿಡುತ್ತೇನೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ನಡೆಯುತ್ತಿದ್ದು, ಪ್ರಕರಣದ ಮೇಲೆ ಪ್ರಭಾವ ಬೀರುವ ಹೇಳಿಕೆ ನೀಡಬಾರದಿತ್ತು’ ಎಂದು ಹೇಳಿದರು.</p>.<p class="title">ಈ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>