ಕೇಂದ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ನವಾಬ್, ʼಲಸಿಕೆ ವಿಚಾರದಲ್ಲಿ ರಾಜಕೀಯ ಇರಬಾರದು ಎಂದು ಆರೋಗ್ಯ ಇಲಾಖೆಯ ರಾಜ್ಯ ಖಾತೆ ಸಚಿವ ಭಾರತಿ ಪ್ರವೀಣ್ಹೇಳುತ್ತಾರೆ. ಕೇಂದ್ರ ಸರ್ಕಾರವು ದೊಡ್ಡ ಪ್ರಮಾಣದ ಅಂಕಿ ಅಂಶಗಳನ್ನು (ಲಸಿಕೆ ಪೂರೈಕೆಗೆ ಸಂಬಂಧ) ತೆರೆದಿಡುತ್ತದೆ. ಆದರೆ, ಲಸಿಕೆಯು ರಾಜ್ಯವನ್ನು ತಲುಪುತ್ತಿಲ್ಲ. ಮುಂಬೈನಲ್ಲಿದ್ದ ಸಾಕಷ್ಟು ಲಸಿಕೆ ವಿತರಣಾ ಕೇಂದ್ರಗಳನ್ನು ಮುಚ್ಚಲಾಗಿದೆʼ ಎಂದು ಹೇಳಿದ್ದಾರೆ.