ಭಾರಿ ಮಳೆಯಿಂದ, ರಾಯಗಡದ ತಾಲಿಯೆ ಗ್ರಾಮದಲ್ಲಿ ಕಳೆದ ಗುರುವಾರ ಭೂಕುಸಿತ ಉಂಟಾಗಿ ಹಲವು ಮನೆಗಳು ನೆಲಸಮವಾಗಿದ್ದವು. ‘ಕಾಣೆಯಾದವರ ಸಂಬಂಧಿಕರು, ಶೋಧ ನಿಲ್ಲಿಸುವಂತೆ ನಿನ್ನೆಯಿಂದಲೇ ಹೇಳುತ್ತಿದ್ದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಭಿಪ್ರಾಯ ಪಡೆದು ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.