<p><strong>ಮುಂಬೈ</strong>: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 14ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮಹಾರಾಷ್ಟ್ರ ಲೋಕಸೇವಾ ಆಯೋಗ (ಎಂಪಿಎಸ್ಸಿ) ಗುರುವಾರ ಮುಂದೂಡಿದೆ.</p>.<p>ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಂಪಿಎಸ್ಸಿ ಹೇಳಿದೆ.</p>.<p>ಎಂಪಿಎಸ್ಸಿಯ ಈ ನಿರ್ಧಾರಕ್ಕೆ ವಿರೋಧ ಪಕ್ಷ ಬಿಜೆಪಿಯಲ್ಲದೇ, ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಎನ್ಸಿಪಿಯಿಂದಲೂ ವಿರೋಧ ವ್ಯಕ್ತವಾಗಿದೆ.</p>.<p>ಈ ನಿರ್ಧಾರದ ಹಿಂದಿನ ಔಚಿತ್ಯ ಏನು ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಪೃಥ್ವಿರಾಜ್ ಚವಾಣ್ ಪ್ರಶ್ನಿಸಿದ್ದಾರೆ.</p>.<p>ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮದುವೆ ಕಾರ್ಯಕ್ರಮಗಳಿಗೆ, ಆರೋಗ್ಯ ಇಲಾಖೆ ಪರೀಕ್ಷೆ ನಡೆಸಲು ಸರ್ಕಾರ ಅನುಮತಿ ನೀಡುತ್ತದೆ. ಬಜೆಟ್ ಅಧಿವೇಶನವನ್ನೂ ನಡೆಸಿರುವಾಗ ಎಂಪಿಎಸ್ಸಿ ಪರೀಕ್ಷೆಗಳನ್ನು ಮಾತ್ರ ಮುಂದೂಡಿರುವುದು ತಪ್ಪು’ ಎಂದು ಹೇಳಿದರು.</p>.<p>‘ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಪರೀಕ್ಷೆಗಾಗಿ ಸಾಕಷ್ಡು ತಯಾರಿ ಮಾಡಿಕೊಂಡಿರುವ ಅಭ್ಯರ್ಥಿಗಳು ಅವಕಾಶ ವಂಚಿತರಾಗಬೇಕಾಗುತ್ತದೆ’ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್ ಟ್ವೀಟ್ ಮಾಡಿದ್ದಾರೆ.</p>.<p>ಶರದ್ ಪವಾರ್ ಮೊಮ್ಮಗ ಹಾಗೂಎನ್ಸಿಪಿ ಶಾಸಕರೂ ಆಗಿರುವ ರೋಹಿತ್ ಪವಾರ್, ‘ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆಗಳನ್ನು ನಡೆಸಬೇಕು’ ಎಂದು ಹೇಳಿದ್ದಾರೆ.</p>.<p>ನೇಮಕಾತಿಗೆ ಸಂಬಂಧಿಸಿದ ಈ ಪರೀಕ್ಷೆಗಳು ಕಳೆದ ವರ್ಷ ಏಪ್ರಿಲ್ನಲ್ಲಿ ನಡೆಯಬೇಕಿದ್ದವು. ಕೋವಿಡ್ ಪಿಡುಗು ಕಾರಣ ನೀಡಿದ್ದ ಪರಿಹಾರ ಮತ್ತು ಪುನರ್ವಸತಿ ಇಲಾಖೆ, ಈ ಪರೀಕ್ಷೆಗಳನ್ನು ಮುಂದೂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 14ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮಹಾರಾಷ್ಟ್ರ ಲೋಕಸೇವಾ ಆಯೋಗ (ಎಂಪಿಎಸ್ಸಿ) ಗುರುವಾರ ಮುಂದೂಡಿದೆ.</p>.<p>ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಂಪಿಎಸ್ಸಿ ಹೇಳಿದೆ.</p>.<p>ಎಂಪಿಎಸ್ಸಿಯ ಈ ನಿರ್ಧಾರಕ್ಕೆ ವಿರೋಧ ಪಕ್ಷ ಬಿಜೆಪಿಯಲ್ಲದೇ, ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಎನ್ಸಿಪಿಯಿಂದಲೂ ವಿರೋಧ ವ್ಯಕ್ತವಾಗಿದೆ.</p>.<p>ಈ ನಿರ್ಧಾರದ ಹಿಂದಿನ ಔಚಿತ್ಯ ಏನು ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಪೃಥ್ವಿರಾಜ್ ಚವಾಣ್ ಪ್ರಶ್ನಿಸಿದ್ದಾರೆ.</p>.<p>ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮದುವೆ ಕಾರ್ಯಕ್ರಮಗಳಿಗೆ, ಆರೋಗ್ಯ ಇಲಾಖೆ ಪರೀಕ್ಷೆ ನಡೆಸಲು ಸರ್ಕಾರ ಅನುಮತಿ ನೀಡುತ್ತದೆ. ಬಜೆಟ್ ಅಧಿವೇಶನವನ್ನೂ ನಡೆಸಿರುವಾಗ ಎಂಪಿಎಸ್ಸಿ ಪರೀಕ್ಷೆಗಳನ್ನು ಮಾತ್ರ ಮುಂದೂಡಿರುವುದು ತಪ್ಪು’ ಎಂದು ಹೇಳಿದರು.</p>.<p>‘ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಪರೀಕ್ಷೆಗಾಗಿ ಸಾಕಷ್ಡು ತಯಾರಿ ಮಾಡಿಕೊಂಡಿರುವ ಅಭ್ಯರ್ಥಿಗಳು ಅವಕಾಶ ವಂಚಿತರಾಗಬೇಕಾಗುತ್ತದೆ’ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್ ಟ್ವೀಟ್ ಮಾಡಿದ್ದಾರೆ.</p>.<p>ಶರದ್ ಪವಾರ್ ಮೊಮ್ಮಗ ಹಾಗೂಎನ್ಸಿಪಿ ಶಾಸಕರೂ ಆಗಿರುವ ರೋಹಿತ್ ಪವಾರ್, ‘ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆಗಳನ್ನು ನಡೆಸಬೇಕು’ ಎಂದು ಹೇಳಿದ್ದಾರೆ.</p>.<p>ನೇಮಕಾತಿಗೆ ಸಂಬಂಧಿಸಿದ ಈ ಪರೀಕ್ಷೆಗಳು ಕಳೆದ ವರ್ಷ ಏಪ್ರಿಲ್ನಲ್ಲಿ ನಡೆಯಬೇಕಿದ್ದವು. ಕೋವಿಡ್ ಪಿಡುಗು ಕಾರಣ ನೀಡಿದ್ದ ಪರಿಹಾರ ಮತ್ತು ಪುನರ್ವಸತಿ ಇಲಾಖೆ, ಈ ಪರೀಕ್ಷೆಗಳನ್ನು ಮುಂದೂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>