ಮಹಾರಾಷ್ಟ್ರ: ಮುಂಬೈನಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರಿನ ಭಾರತ್ ನಗರ ಪ್ರದೇಶದಲ್ಲಿ ಮನೆಯ ಗೋಡೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ.
ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಕೆರೆಯಂತಾಗಿರುವ ರಸ್ತೆಗಳು ಕಾರುಗಳು ಸೇರಿದಂತೆ ಹಲವು ವಾಹನಗಳು ತೇಲಿ ಹೋಗಿವೆ. ಸಂಚಾರ ವ್ಯವಸ್ಥೆಗೆ ಅಡಚಣೆ ಉಂಟಾಗಿದ್ದು, ಲೋಕಲ್ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ... ಮುಂಬೈ: ರಾತ್ರಿಯಿಡೀ ಸುರಿದ ಭಾರಿ ಮಳೆ, ಹಲವು ಪ್ರದೇಶಗಳು ಜಲಾವೃತ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.