ಇದಕ್ಕೂ ಮುನ್ನ ಅವರು, ನಿಮ್ಮ ಸಂಪರ್ಕದಲ್ಲಿರುವ ಒಬ್ಬ ಬಂಡಾಯ ಶಾಸಕನನ್ನು ಹೆಸರಿಸಿ ಎಂದು ಶಿವಸೇನಾ ಮುಖ್ಯಸ್ಥ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪಕ್ಷದ ಬಂಡಾಯ ನಾಯಕ ಏಕನಾಥ ಶಿಂಧೆ ಸವಾಲು ಹಾಕಿದ್ದರು. ಗುವಾಹಟಿಯ ಹೋಟೆಲ್ನಲ್ಲಿರುವ ಬಂಡಾಯ ಶಾಸಕರ ಪೈಕಿ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಹಾಗೂ ಸಂಜಯ್ ರಾವುತ್ ಹೇಳಿಕೆಗಳಿಗೆ ಶಿಂಧೆ, ಈ ಮೂಲಕ ತಿರುಗೇಟು ನೀಡಿದ್ದಾರೆ.