ಕೇರಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಪ್ರಜಾಪ್ರಭುತ್ವ ಮಾರಾಟಕ್ಕಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಿದೆ. ಯಾರು ಬೇಕಾದರೂ ಬಂದು ಹಣ ತೆಗೆದುಕೊಂಡು ಬಿಜೆಪಿ ಸೇರಬಹುದು. ಇದು ಭಾರತದ ಪ್ರಜಾಪ್ರಭುತ್ವದ ಭವಿಷ್ಯ. ಆದರೆ, ಭಾರತದ ಜನರು ಇದರ ವಿರುದ್ಧ ಹೋರಾಡಲಿದ್ದಾರೆ’ ಎಂದು ತಿಳಿಸಿದ್ದಾರೆ.
ಶಿವಸೇನಾ ಬಂಡಾಯ ಬಣ ಹಾಗೂ ಬಿಜೆಪಿ ಮೈತ್ರಿ ಸರ್ಕಾರವು ಜುಲೈ 4 ರಂದು ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತಯಾಚನೆ ಮಾಡಲಿದೆ.