ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾತಂತ್ರ ಮಾರಾಟಕ್ಕಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಿದೆ: ಕೆ.ಸಿ.ವೇಣುಗೋಪಾಲ

ಅಕ್ಷರ ಗಾತ್ರ

ಕೊಚ್ಚಿ: ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ವಿರುದ್ಧ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ ವಾಗ್ದಾಳಿ ನಡೆಸಿದ್ದಾರೆ.

ಕೇರಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಪ್ರಜಾಪ್ರಭುತ್ವ ಮಾರಾಟಕ್ಕಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಿದೆ. ಯಾರು ಬೇಕಾದರೂ ಬಂದು ಹಣ ತೆಗೆದುಕೊಂಡು ಬಿಜೆಪಿ ಸೇರಬಹುದು. ಇದು ಭಾರತದ ಪ್ರಜಾಪ್ರಭುತ್ವದ ಭವಿಷ್ಯ. ಆದರೆ, ಭಾರತದ ಜನರು ಇದರ ವಿರುದ್ಧ ಹೋರಾಡಲಿದ್ದಾರೆ’ ಎಂದು ತಿಳಿಸಿದ್ದಾರೆ.

ಶಿವಸೇನಾ ಬಂಡಾಯ ಬಣ ಹಾಗೂ ಬಿಜೆಪಿ ಮೈತ್ರಿ ಸರ್ಕಾರವು ಜುಲೈ 4 ರಂದು ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತಯಾಚನೆ ಮಾಡಲಿದೆ.

ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ನರ್ವೇಕರ್‌ ಆಯ್ಕೆಯಾಗಿದ್ದು, ಸೋಮವಾರದ ವಿಶ್ವಾಸ ಮತಕ್ಕೂ ಮೊದಲು ಏಕನಾಥ ಶಿಂಧೆ–ಬಿಜೆಪಿ ದೋಸ್ತಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT