ಮಹಾರಾಷ್ಟ್ರ ವಿಧಾನಪರಿಷತ್ಗೆ ಸೋಮವಾರ ನಡೆದ ಚುನಾವಣೆಯಲ್ಲಿ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಾಂತ್ ಹಂಡೊರೆಗೆ ಸೋಲಾಗಿತ್ತು. ಆಡಳಿತಾರೂಢ ಮೈತ್ರಿಕೂಟ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಐವರು ಮಾತ್ರ ಜಯಗಳಿಸಿದ್ದರು. ಹೀಗಾಗಿ ಅಡ್ಡಮತದಾನವಾಗಿರುವ ಶಂಕೆ ವ್ಯಕ್ತವಾಗಿತ್ತು. ಬಿಜೆಪಿಯ ಎಲ್ಲ ಐವರು ಅಭ್ಯರ್ಥಿಗಳು ಜಯಗಳಿಸಿದ್ದರು.