<p><strong>ನವದೆಹಲಿ:</strong> ಶಿವಸೇನಾ ಮತ್ತು ಅದರ ಬಂಡಾಯ ಶಾಸಕರು ಸಲ್ಲಿಸಿರುವ ಅರ್ಜಿಗಳಲ್ಲಿ ಪಕ್ಷಾಂತರ, ವಿಲೀನ ಮತ್ತು ಅನರ್ಹತೆಗೆ ಸಂಬಂಧಿಸಿದಂತೆ ಹಲವು ಸಾಂವಿಧಾನಿಕ ಪ್ರಶ್ನೆಗಳು ಇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ವಿಚಾರಣೆಯು ಹೆಚ್ಚು ನ್ಯಾಯಮೂರ್ತಿಗಳಿರುವ ವಿಸ್ತೃತ ಪೀಠದಲ್ಲಿ ನಡೆಯುವುದು ಸೂಕ್ತ ಎಂದು ಸುಪ್ರೀಂಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.</p>.<p>ವಿಸ್ತೃತ ಪೀಠದಲ್ಲಿ ಈ ವಿಷಯಗಳ ವಿಚಾರಣೆ ಆಗಬೇಕು ಎಂಬುದಕ್ಕೆ ಪೂರಕವಾಗಿ ವಿಷಯಗಳನ್ನು ರೂಪಿಸಿ ಇದೇ 27ರೊಳಗೆ ಸಲ್ಲಿಸುವಂತೆ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಅವರ ಪೀಠವು ಕಕ್ಷಿದಾರರಿಗೆ ನಿರ್ದೇಶಿಸಿತು.</p>.<p>‘ಕಕ್ಷಿದಾರರ ಪರ ವಕೀಲರ ವಾದಗಳನ್ನು ಆಲಿಸಿದ ನ್ಯಾಯಪೀಠವು, ಈ ವಿಷಯಗಳನ್ನು ವಿಸ್ತೃತ ಪೀಠಕ್ಕೆ ರವಾನಿಸುವುದು ಸೂಕ್ತ. ಅದಕ್ಕೆ ಪೂರಕವಾಗಿ ವಿಷಯಗಳನ್ನು ಸಿದ್ಧಪಡಿಸಿ ಮುಂದಿನ ಬುಧವಾರದೊಳಗೆ ಸಲ್ಲಿಸಿ. ಈ ಕುರಿತ ವಿಚಾರಣೆಯನ್ನು ಆಗಸ್ಟ್ 1 ರಂದು ನಡೆಸಲಾಗುವುದು’ ಎಂದು ಪೀಠ ಹೇಳಿತು.</p>.<p>ಮಹಾರಾಷ್ಟ್ರ ರಾಜ್ಯದಲ್ಲಿನ ಮಹಾರಾಷ್ಟ್ರ ವಿಕಾಸ ಆಘಾಡಿ (ಎಂವಿಎ) ಸರ್ಕಾರದ ಪತನ ಹಾಗೂ ಅದಕ್ಕೆ ಸಂಬಂಧಿಸಿದ ರಾಜಕೀಯ ಬಿಕ್ಕಟ್ಟಿನ ಕುರಿತು ನ್ಯಾಯಪೀಠದಲ್ಲಿ ಐದು ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ.</p>.<p>ಶಿವಸೇನಾದ ಉದ್ಧವ್ ಠಾಕ್ರೆ ಬಣದ ಪರ ವಕೀಲ ಕಪಿಲ್ ಸಿಬಲ್, ಶಿವಸೇನಾದ ಮಾಜಿ ಮುಖ್ಯ ಸಚೇತಕ ಸುನಿಲ್ ಪ್ರಭು ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಾಡಿದರು.</p>.<p><a href="https://www.prajavani.net/india-news/ready-for-debate-once-finance-minister-nirmala-sitharaman-recovers-says-bjp-956062.html" itemprop="url">ಹಣಕಾಸು ಸಚಿವರು ಕೋವಿಡ್ನಿಂದ ಗುಣಮುಖರಾದ ಬಳಿಕ ಚರ್ಚೆಗೆ ಸಿದ್ಧರಿದ್ದಾರೆ: ಬಿಜೆಪಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶಿವಸೇನಾ ಮತ್ತು ಅದರ ಬಂಡಾಯ ಶಾಸಕರು ಸಲ್ಲಿಸಿರುವ ಅರ್ಜಿಗಳಲ್ಲಿ ಪಕ್ಷಾಂತರ, ವಿಲೀನ ಮತ್ತು ಅನರ್ಹತೆಗೆ ಸಂಬಂಧಿಸಿದಂತೆ ಹಲವು ಸಾಂವಿಧಾನಿಕ ಪ್ರಶ್ನೆಗಳು ಇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ವಿಚಾರಣೆಯು ಹೆಚ್ಚು ನ್ಯಾಯಮೂರ್ತಿಗಳಿರುವ ವಿಸ್ತೃತ ಪೀಠದಲ್ಲಿ ನಡೆಯುವುದು ಸೂಕ್ತ ಎಂದು ಸುಪ್ರೀಂಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.</p>.<p>ವಿಸ್ತೃತ ಪೀಠದಲ್ಲಿ ಈ ವಿಷಯಗಳ ವಿಚಾರಣೆ ಆಗಬೇಕು ಎಂಬುದಕ್ಕೆ ಪೂರಕವಾಗಿ ವಿಷಯಗಳನ್ನು ರೂಪಿಸಿ ಇದೇ 27ರೊಳಗೆ ಸಲ್ಲಿಸುವಂತೆ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಅವರ ಪೀಠವು ಕಕ್ಷಿದಾರರಿಗೆ ನಿರ್ದೇಶಿಸಿತು.</p>.<p>‘ಕಕ್ಷಿದಾರರ ಪರ ವಕೀಲರ ವಾದಗಳನ್ನು ಆಲಿಸಿದ ನ್ಯಾಯಪೀಠವು, ಈ ವಿಷಯಗಳನ್ನು ವಿಸ್ತೃತ ಪೀಠಕ್ಕೆ ರವಾನಿಸುವುದು ಸೂಕ್ತ. ಅದಕ್ಕೆ ಪೂರಕವಾಗಿ ವಿಷಯಗಳನ್ನು ಸಿದ್ಧಪಡಿಸಿ ಮುಂದಿನ ಬುಧವಾರದೊಳಗೆ ಸಲ್ಲಿಸಿ. ಈ ಕುರಿತ ವಿಚಾರಣೆಯನ್ನು ಆಗಸ್ಟ್ 1 ರಂದು ನಡೆಸಲಾಗುವುದು’ ಎಂದು ಪೀಠ ಹೇಳಿತು.</p>.<p>ಮಹಾರಾಷ್ಟ್ರ ರಾಜ್ಯದಲ್ಲಿನ ಮಹಾರಾಷ್ಟ್ರ ವಿಕಾಸ ಆಘಾಡಿ (ಎಂವಿಎ) ಸರ್ಕಾರದ ಪತನ ಹಾಗೂ ಅದಕ್ಕೆ ಸಂಬಂಧಿಸಿದ ರಾಜಕೀಯ ಬಿಕ್ಕಟ್ಟಿನ ಕುರಿತು ನ್ಯಾಯಪೀಠದಲ್ಲಿ ಐದು ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ.</p>.<p>ಶಿವಸೇನಾದ ಉದ್ಧವ್ ಠಾಕ್ರೆ ಬಣದ ಪರ ವಕೀಲ ಕಪಿಲ್ ಸಿಬಲ್, ಶಿವಸೇನಾದ ಮಾಜಿ ಮುಖ್ಯ ಸಚೇತಕ ಸುನಿಲ್ ಪ್ರಭು ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಾಡಿದರು.</p>.<p><a href="https://www.prajavani.net/india-news/ready-for-debate-once-finance-minister-nirmala-sitharaman-recovers-says-bjp-956062.html" itemprop="url">ಹಣಕಾಸು ಸಚಿವರು ಕೋವಿಡ್ನಿಂದ ಗುಣಮುಖರಾದ ಬಳಿಕ ಚರ್ಚೆಗೆ ಸಿದ್ಧರಿದ್ದಾರೆ: ಬಿಜೆಪಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>