ಇದರ ಮೊದಲ ಹೆಜ್ಜೆಯಾಗಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾದ(ಎಸ್ಕೆಂ) ನಾಯಕ ರಾಕೇಶ್ ಟಿಕಾಯತ್ ಅವರು ಇದೇ 20ರಂದು ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ‘ರೈತ ಮಹಾಸಭೆ ‘(ಕಿಸಾನ್ ಮಹಾಪಂಚಾಯತ್)'ನಡೆಸುತ್ತಿದ್ದು, ಇದೇ ವೇಳೆ ಸಾರ್ವಜನಿಕ ರ್ಯಾಲಿಯನ್ನೂ ಆಯೋಜಿಸಲಾಗಿದೆ ಎಂದು ಮೋರ್ಚಾದ ಮಹಾರಾಷ್ಟ್ರ ರಾಜ್ಯದ ಸಂಯೋಜಕ ಸಂದೀಪ್ ಗಿಡ್ಡೆ ಗುರುವಾರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.