ಒಂದು ತಿಂಗಳಾದರೂ ಪರಿಸ್ಥಿತಿ ಸುಧಾರಿಸದೇ ಇರುವುದರಿಂದ ವಿದ್ಯಾರ್ಥಿಯೊಬ್ಬ ಎನ್ಸಿಪಿಸಿಆರ್ಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದಾನೆ. ತಕ್ಷಣ ಕಾರ್ಯಪ್ರವೃತ್ತವಾಗಿರುವ ಎನ್ಸಿಪಿಸಿಆರ್, ಸ್ಥಳೀಯ ದೂರಸಂಪರ್ಕ ಆಪರೇಟರ್ಗಳು ಮತ್ತು ಜಿಲ್ಲಾಡಳಿತವನ್ನು ಸಂಪರ್ಕಿಸಿ, ಆದಷ್ಟು ಬೇಗ ಅಂತರ್ಜಾಲ ಸಂಪರ್ಕ ಮರಳಿ ಕಲ್ಪಿಸುವಂತೆ ಸೂಚಿಸಿತ್ತು. ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆಯನ್ನೂ ನೀಡಲಾಗಿದೆ ಎಂದು ಎನ್ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕಾನೂನಗೋ ತಿಳಿಸಿದ್ದರು.