‘ಕೇಸರಿ ಪಕ್ಷದವರ ಮೇಲೆ ಯಾವುದೇ ತನಿಖೆ ಇರುವುದಿಲ್ಲ. ಹಾಗಾಗಿ ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದೇನೆ’ ಎಂದು ಬಿಜೆಪಿ ನಾಯಕ ಹರ್ಷವರ್ಧನ್ ಪಾಟೀಲ್ ಇತ್ತೀಚೆಗೆ ಹೇಳಿದ್ದರು. ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರವು ಸಿಬಿಐ, ಇ.ಡಿ ಹಾಗೂ ಎನ್ಸಿಬಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಎನ್ಸಿಪಿ ವರಿಷ್ಠ ಶರದ್ ಪವಾರ್ ಇತ್ತೀಚೆಗೆ ಆರೋಪಿಸಿದರು. ಅದೇ ದಿನ ಹರ್ಷವರ್ಧನ್ ಪಾಟೀಲ್ ಕೂಡ ಹೇಳಿಕೆ ನೀಡಿದ್ದರು.