ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಆಕ್ಷೇಪಾರ್ಹ ಪೋಸ್ಟ್‌–ಕಲ್ಲು ತೂರಾಟ, ನಾಲ್ವರು ಪೊಲೀಸರಿಗೆ ಗಾಯ

Last Updated 20 ಅಕ್ಟೋಬರ್ 2021, 6:54 IST
ಅಕ್ಷರ ಗಾತ್ರ

ಔರಂಗಾಬಾದ್‌: ಮೊಘಲ್‌ ಚಕ್ರವರ್ತಿ ಔರಂಗಜೇಬ್‌ ವಿರುದ್ಧಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕಿರುವುದನ್ನು ಖಂಡಿಸಿ150ಕ್ಕೂ ಹೆಚ್ಚು ಜನರ ಉದ್ರಿಕ್ತ ಗುಂಪು ಮಹಾರಾಷ್ಟ್ರದ ಉಸ್ಮಾನಾಬಾದ್‌ ನಗರದ ರಸ್ತೆಯಲ್ಲಿ ವಾಹನಗಳು ಮತ್ತು ಹೋರ್ಡಿಂಗ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.

ವಿಜಯ್‌ ಚೌಕ್‌ ಪ್ರದೇಶದಲ್ಲಿ ಮಂಗಳವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಉದ್ರಿಕ್ತ ಗುಂಪನ್ನು ತಡೆಯಲು ಯತ್ನಿಸುವಾಗ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

‘ವಿಜಯ್‌ ಚೌಕ್‌ ಪ್ರದೇಶದಲ್ಲಿ ಒಂದು ಹೋರ್ಡಿಂಗ್‌, ಒಂದು ಪೊಲೀಸ್‌ ವಾಹನ ಮತ್ತು ಒಂದು ಆಟೊ ರಿಕ್ಷಾವನ್ನು ಉದ್ರಿಕ್ತ ಜನರು ಧ್ವಂಸಗೊಳಿಸಿದರು. ಗುಂಪನ್ನು ತಡೆಯಲು ಪ್ರಯತ್ನಿಸುತ್ತಿದ್ದಾಗ ಒಬ್ಬ ಅಧಿಕಾರಿ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ’ ಎಂದು ಉಸ್ಮಾನಾಬಾದ್‌ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಸುರೇಶ್‌ ಬುಧವಂತ್‌ ಪಿಟಿಐಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT