ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಬೀದಿ ನಾಯಿ ಸಜೀವ ದಹನ: ಪ್ರಕರಣ ದಾಖಲು

Last Updated 16 ಏಪ್ರಿಲ್ 2021, 6:06 IST
ಅಕ್ಷರ ಗಾತ್ರ

ಠಾಣೆ: ಮಹಾರಾಷ್ಟ್ರದ ಠಾಣೆ ನಗರದಲ್ಲಿ ಬೀದಿ ನಾಯಿಯೊಂದನ್ನು ಜೀವಂತವಾಗಿ ಸುಟ್ಟು ಹಾಕಿದ ಆರೋಪದಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಿಟಿಜನ್ಸ್ ಫಾರ್ ಅನಿಮಲ್ ಪ್ರೊಟೆಕ್ಷನ್ ಫೌಂಡೇಶನ್‌ನ ಸದಸ್ಯರೊಬ್ಬರು ಈ ಸಂಬಂಧ ರಬೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ’ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದರು.

‘ಮಸನ್ವಾಡಾದಲ್ಲಿ ಅಪರಿಚಿತ ವ್ಯಕ್ತಿಗಳು ಬೀದಿನಾಯಿಯನ್ನು ಸಜೀವ ದಹನ ಮಾಡಿರುವ ಬಗ್ಗೆ ಮಂಗಳವಾರ ಸಂಜೆ ನನಗೆ ಮಾಹಿತಿ ಸಿಕ್ಕಿದೆ. ನಾನು ಘಟನಾ ಸ್ಥಳಕ್ಕೆ ತಲುಪಿದಾಗ ಅಲ್ಲಿ ಭಾಗಶಃ ಸುಟ್ಟ ನಾಯಿ ಪತ್ತೆಯಾಯಿತು. ತಕ್ಷಣವೇ ನಾಯಿಯನ್ನು ಪಶು ಚಿಕಿತ್ಸಾಲಯಕ್ಕೆ ಕರೆದುಕೊಂಡು ಹೋದೆವು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಾಯಿ ಮೃತಪಟ್ಟಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಬುಧವಾರ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT