ಒಂಬತ್ತು ವರ್ಷಗಳ ಹಿಂದೆ ಕಾರ್ಯಾಚರಣೆಯಿಂದ ಸ್ಥಗಿತಗೊಂಡಿದ್ದ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಹೆಸರಿನಲ್ಲಿ ಸಂಗ್ರಹಿಸಿದ ₹ 57 ಕೋಟಿಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣ ಸೋಮಯ್ಯ ಹಾಗೂ ಅವರ ಪುತ್ರನ ವಿರುದ್ಧ ದಾಖಲಾಗಿದೆ. ಬುಧವಾರ ಬೆಳಿಗ್ಗೆ 11ಕ್ಕೆ ತನಿಖಾಧಿಕಾರಿಯ ಎದುರು ಹಾಜರಾಗುವಂತೆ ಅವರಿಬ್ಬರಿಗೂ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.