‘ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದ್ದರು. ಪ್ರಕರಣ ಸಂಬಂಧ ಮೂವರನ್ನೂ ಬಂಧಿಸಲಾಗಿತ್ತು. ನಂತರ ನಂದುರಬಾರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ವರದಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರವಾಗಿಲ್ಲ ಎಂದು ಹೇಳಲಾಗಿತ್ತು. ಆದ್ದರಿಂದ, ಮಹಿಳೆಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಒಪ್ಪದ ಮಹಿಳೆಯ ಕುಟುಂಬದವರು ‘ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ’ ಎಂದು ದೂರಿ, ಮಹಿಳೆಯ ಶವವನ್ನು ಉಪ್ಪಿನ ಗುಂಡಿಯಲ್ಲಿ ಸಂರಕ್ಷಿಸಿ ಇಟ್ಟಿದ್ದರು’ ಎಂದು ತಿಳಿಸಿದರು.