ವ್ಯಾಪಾರಿಗಳೊಂದಿಗಿನ ಕೃಷಿ ಒಪ್ಪಂದ, ಸಕಾಲದಲ್ಲಿ ಬಾಕಿ ಪಾವತಿ, ರೈತರಿಗೆ ಕಿರುಕುಳ ನೀಡಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದಂಡ ಅಥವಾ ಎರಡೂ ಶಿಕ್ಷೆ, ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ದರಕ್ಕಿಂತ ಹೆಚ್ಚಿನ ಮೊತ್ತ ನಿಗದಿಪಡಿಸುವ ನಿಯಮವನ್ನು ಮಸೂದೆಗಳು ಹೊಂದಿದೆ. ಉತ್ಪಾದನೆ, ಪೂರೈಕೆ, ವಿತರಣೆಯನ್ನು ನಿಯಂತ್ರಿಸಲು ಮತ್ತು ನಿಷೇಧಿಸಲು ಮತ್ತು ಅಗತ್ಯ ವಸ್ತುಗಳ ಮೇಲೆ ಸ್ಟಾಕ್ ಮಿತಿಗಳನ್ನು ಹೇರಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ನಿಬಂಧನೆಗಳೂ ಇವೆ.