ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗ್ಪುರ: ಚಿತೆಗೆ ಅಗ್ನಿಸ್ಪರ್ಶ ವೇಳೆ ಡೀಸೆಲ್ ಕ್ಯಾನ್‌ಗೆ ಬೆಂಕಿ, ಇಬ್ಬರು ಸಾವು

Last Updated 29 ಜುಲೈ 2022, 9:09 IST
ಅಕ್ಷರ ಗಾತ್ರ

ನಾಗ್ಪುರ: ಚಿತೆಗೆ ಅಗ್ನಿ ಸ್ಪರ್ಶ ಮಾಡುವ ವೇಳೆ ಡೀಸೆಲ್ ಕ್ಯಾನ್‌ಗೆ ಬೆಂಕಿ ತಗುಲಿ ಇಬ್ಬರು ಮೃತಪಟ್ಟು, ಒಬ್ಬ ವ್ಯಕ್ತಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾಮ್‌ಠಿ ಎಂಬಲ್ಲಿ ನಡೆದಿದೆ.

ಕಾಮ್‌ಠಿಯ ಮೋಕ್ಷಧಾಮ್ ಘಾಟ್‌ನಲ್ಲಿ ಗುರುವಾರ ಸಂಜೆ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ವ್ಯಕ್ತಿಯೊಬ್ಬರ ಅಂತ್ಯ ಸಂಸ್ಕಾರಕ್ಕೆ ತೆರಳಿದ್ದರು. ಚಿತೆಗೆ ಅಗ್ನಿ ಸ್ಪರ್ಶ ಮಾಡುವುದಕ್ಕೆ ಡೀಸೆಲ್ ಬಳಸಲಾಗಿತ್ತು. ಡೀಸೆಲ್ ಕ್ಯಾನ್‌ ತೆರೆದಾಗ ಬೆಂಕಿಹೊತ್ತಿಕೊಂಡಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುಧೀರ್ ಡೋಂಗ್ರೆ (45) ಹಾಗೂ ದಿಲೀಪ್ ಖೋಬ್ರಗಡೆ (60) ಮೃತರು. ಸುಧಾಕರ್ ಖೋಬ್ರಗಡೆ (50) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಬಳಿಕ ಅದರ ಮೇಲೆ ಮೂವರೂ ಕ್ಯಾನ್‌ನಿಂದ ಡೀಸೆಲ್ ಎರಚುತ್ತಿದ್ದರು. ಈ ವೇಳೆ ಬೆಂಕಿ ಕ್ಯಾನ್‌ಗೆ ಹೊತ್ತಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಆಕಸ್ಮಿಕ ಮರಣ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT