ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧಪಕ್ಷ ಡೆಮಾಕ್ರಟಿಕ್ ಪಕ್ಷ ಆಡಳಿತವಿರುವ ರಾಜ್ಯಗಳ ರಾಜ್ಯಪಾಲರು ಅಂಚೆ ಮತದಾನ ಮಾಡುವುದನ್ನು ಉತ್ತೇಜಿಸುತ್ತಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಈ ಕಾಲದಲ್ಲಿ ಈ ಪ್ರಕ್ರಿಯೆಯೇ ಆದ್ಯತೆಯಾಗಬೇಕು ಎಂದು ಹೇಳಿದ್ದಾರೆ. ಆದರೆ, ಇವರು ಲಕ್ಷಾಂತರ ಮತಪತ್ರಗಳನ್ನೇ ನಿಯಂತ್ರಿಸುತ್ತಾರೆ. ಇದು ಅಧ್ಯಕ್ಷೀಯ ಚುನಾವಣೆಯಲ್ಲಿ ನಮಗೆ ಎದುರಾಗಿರುವ ದೊಡ್ಡ ಆತಂಕ. ಇದು ಚುನಾವಣೆಯಲ್ಲಿ ವಿದೇಶಿಗರ ಹಸ್ತಕ್ಷೇಪಕ್ಕಿಂತ ಬಹಳ ದೊಡ್ಡ ಬೆದರಿಕೆ‘ ಎಂದು ತಿಳಿಸಿದ್ದಾರೆ.