<p><strong>ನವದೆಹಲಿ: </strong>ಕಳೆದ 12 ತಿಂಗಳಿಂದ ದೇಶದ ಜನರನ್ನು ಕಂಗೆಡಿಸಿರುವ ಕೋವಿಡ್ ಮಹಾಮಾರಿ ತೊಡೆದುಹಾಕುವ ನಿಟ್ಟಿನಲ್ಲಿ ಬೃಹತ್ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇಂದಿನಿಂದ 3 ಕೋಟಿ ಆರೋಗ್ಯ ಮತ್ತು ಇತರ ಮುಂಚೂಣಿ ಕಾರ್ಯಕರ್ತರಿಗೆ ಮೊದಲಿಗೆಲಸಿಕೆ ಹಾಕಲಾಗುತ್ತಿದೆ. ಈ ಲಸಿಕೆ ಅಭಿಯಾನದ ಬಗ್ಗೆ ತಿಳಿಯಬೇಕಾದ ಕೆಲವು ಮಾಹಿತಿಗಳು ಇಲ್ಲಿವೆ.</p>.<p>1. ‘ಕೋವಿಡ್–19 ಅಂತ್ಯದ ಆರಂಭ‘ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಬಣ್ಣಿಸಿರುವ ಈ ಲಸಿಕೆ ಅಭಿಯಾನದಲ್ಲಿ ಮೊದಲ ದಿನ 3 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಸ್ವೀಕರಿಸಲಿದ್ದಾರೆ.</p>.<p>2. ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ ದೇಶದಾದ್ಯಂತ 3,000 ಕಡೆಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಪ್ರತಿ ಲಸಿಕೆ ಕೇಂದ್ರದಲ್ಲಿ ಮೊದಲ ದಿನ 100 ಜನರಿಗೆ ಲಸಿಕೆ ಹಾಕಲಾಗುತ್ತದೆ.</p>.<p>3. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಆಕ್ಸ್ಫರ್ಡ್ ಯುನಿವರ್ಸಿಟಿ-ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಎರಡೂ ಲಸಿಕೆಗಳು ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ ಎಂಬುದನ್ನು ಸಾಬೀತು ಮಾಡಿವೆ ಎಂದು ಹರ್ಷವರ್ಧನ್ ಹೇಳಿದ್ದಾರೆ.</p>.<p>4. ಹಂತ ಹಂತವಾಗಿ ಲಸಿಕೆ ವಿತರಣೆಗೆ ಯೋಜನೆ ಮಾಡಲಾಗಿದೆ. ಆದ್ಯತೆ ಆಧಾರದ ಮೇಲೆ ಗುಂಪುಗಳನ್ನು ಗುರುತಿಸಿ ಫೋನ್ ಮೂಲಕ ಮಾಹಿತಿ ನೀಡಿ ಲಸಿಕೆ ಹಾಕಲಾಗುತ್ತದೆ. ಇದರ ಭಾಗವಾಗಿ, ಮೊದಲ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕಾರ್ಯಕರ್ತರು ಲಸಿಕೆ ಹಾಕಿಸಿಕೊಳ್ಳುತ್ತಾರೆ.</p>.<p>5. ಸರ್ಕಾರದ ಮಾಹಿತಿ ಪ್ರಕಾರ, 1 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2 ಕೋಟಿ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಬಳಿಕ ಕ್ರಮವಾಗಿ 50 ವರ್ಷ ಮೇಲ್ಪಟ್ಟವರಿಗೆ, 50 ವರ್ಷ ಒಳಗಿನ ಆರೋಗ್ಯ ಸಂಬಂಧಿತ ಸಮಸ್ಯೆ ಇರುವ ನಾಗರಿಕರಿಗೆ ಲಸಿಕೆ ಹಾಕಲಾಗುತ್ತದೆ.</p>.<p>6. 700 ಜಿಲ್ಲೆಗಳಲ್ಲಿ ಸುಮಾರು 1.5 ಲಕ್ಷ ಸಿಬ್ಬಂದಿಗೆ ಲಸಿಕೆ ವಿತರಣೆಗೆ ವಿಶೇಷ ತರಬೇತಿ ನೀಡಲಾಗಿದೆ. ಲಸಿಕೆ ವಿತರಣೆ ವ್ಯವಸ್ಥೆ ಪರಿಶೀಲನೆಗೆ ಲಸಿಕೆ ತಾಲೀಮನ್ನು ದೇಶದಾದ್ಯಂತ ನಡೆಸಲಾಗಿದೆ.<br /><br />7. ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಮುಗಿಸದ ಕೊವಾಕ್ಸಿನ್ ಲಸಿಕೆಯನ್ನು ಯಾವ ಆಧಾರದ ಮೇಲೆ ಪರಿಗಣನೆ ಮಾಡಲಾಗಿದೆ ಎಂಬ ಆರೋಗ್ಯ ತಜ್ಞರು ಮತ್ತು ಪ್ರತಿಪಕ್ಷದ ಕಳವಳವನ್ನು ನಿವಾರಿಸಲು ಸರ್ಕಾರ ಬಹುವಾಗಿ ಶ್ರಮಿಸಿದೆ.</p>.<p>8. 2019 ರ ಅಂತ್ಯದಲ್ಲಿ ಚೀನಾದ ವುಹಾನ್ನಲ್ಲಿ ಕಾಣಿಸಿಕೊಂಡ ಕೊರೊನಾ ಸೋಂಕು ಜನವರಿಯಲ್ಲಿ ಭಾರತದಲ್ಲಿ ಕಾಣಿಸಿಕೊಂಡಿತು. ಈ ಸಾಂಕ್ರಾಮಿಕ ರೋಗವು ದೇಶದಲ್ಲಿ ಇದುವರೆಗೆ 1.5 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 1.05 ಕೋಟಿಗೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕಳೆದ 12 ತಿಂಗಳಿಂದ ದೇಶದ ಜನರನ್ನು ಕಂಗೆಡಿಸಿರುವ ಕೋವಿಡ್ ಮಹಾಮಾರಿ ತೊಡೆದುಹಾಕುವ ನಿಟ್ಟಿನಲ್ಲಿ ಬೃಹತ್ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇಂದಿನಿಂದ 3 ಕೋಟಿ ಆರೋಗ್ಯ ಮತ್ತು ಇತರ ಮುಂಚೂಣಿ ಕಾರ್ಯಕರ್ತರಿಗೆ ಮೊದಲಿಗೆಲಸಿಕೆ ಹಾಕಲಾಗುತ್ತಿದೆ. ಈ ಲಸಿಕೆ ಅಭಿಯಾನದ ಬಗ್ಗೆ ತಿಳಿಯಬೇಕಾದ ಕೆಲವು ಮಾಹಿತಿಗಳು ಇಲ್ಲಿವೆ.</p>.<p>1. ‘ಕೋವಿಡ್–19 ಅಂತ್ಯದ ಆರಂಭ‘ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಬಣ್ಣಿಸಿರುವ ಈ ಲಸಿಕೆ ಅಭಿಯಾನದಲ್ಲಿ ಮೊದಲ ದಿನ 3 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಸ್ವೀಕರಿಸಲಿದ್ದಾರೆ.</p>.<p>2. ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ ದೇಶದಾದ್ಯಂತ 3,000 ಕಡೆಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಪ್ರತಿ ಲಸಿಕೆ ಕೇಂದ್ರದಲ್ಲಿ ಮೊದಲ ದಿನ 100 ಜನರಿಗೆ ಲಸಿಕೆ ಹಾಕಲಾಗುತ್ತದೆ.</p>.<p>3. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಆಕ್ಸ್ಫರ್ಡ್ ಯುನಿವರ್ಸಿಟಿ-ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಎರಡೂ ಲಸಿಕೆಗಳು ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ ಎಂಬುದನ್ನು ಸಾಬೀತು ಮಾಡಿವೆ ಎಂದು ಹರ್ಷವರ್ಧನ್ ಹೇಳಿದ್ದಾರೆ.</p>.<p>4. ಹಂತ ಹಂತವಾಗಿ ಲಸಿಕೆ ವಿತರಣೆಗೆ ಯೋಜನೆ ಮಾಡಲಾಗಿದೆ. ಆದ್ಯತೆ ಆಧಾರದ ಮೇಲೆ ಗುಂಪುಗಳನ್ನು ಗುರುತಿಸಿ ಫೋನ್ ಮೂಲಕ ಮಾಹಿತಿ ನೀಡಿ ಲಸಿಕೆ ಹಾಕಲಾಗುತ್ತದೆ. ಇದರ ಭಾಗವಾಗಿ, ಮೊದಲ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕಾರ್ಯಕರ್ತರು ಲಸಿಕೆ ಹಾಕಿಸಿಕೊಳ್ಳುತ್ತಾರೆ.</p>.<p>5. ಸರ್ಕಾರದ ಮಾಹಿತಿ ಪ್ರಕಾರ, 1 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2 ಕೋಟಿ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಬಳಿಕ ಕ್ರಮವಾಗಿ 50 ವರ್ಷ ಮೇಲ್ಪಟ್ಟವರಿಗೆ, 50 ವರ್ಷ ಒಳಗಿನ ಆರೋಗ್ಯ ಸಂಬಂಧಿತ ಸಮಸ್ಯೆ ಇರುವ ನಾಗರಿಕರಿಗೆ ಲಸಿಕೆ ಹಾಕಲಾಗುತ್ತದೆ.</p>.<p>6. 700 ಜಿಲ್ಲೆಗಳಲ್ಲಿ ಸುಮಾರು 1.5 ಲಕ್ಷ ಸಿಬ್ಬಂದಿಗೆ ಲಸಿಕೆ ವಿತರಣೆಗೆ ವಿಶೇಷ ತರಬೇತಿ ನೀಡಲಾಗಿದೆ. ಲಸಿಕೆ ವಿತರಣೆ ವ್ಯವಸ್ಥೆ ಪರಿಶೀಲನೆಗೆ ಲಸಿಕೆ ತಾಲೀಮನ್ನು ದೇಶದಾದ್ಯಂತ ನಡೆಸಲಾಗಿದೆ.<br /><br />7. ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಮುಗಿಸದ ಕೊವಾಕ್ಸಿನ್ ಲಸಿಕೆಯನ್ನು ಯಾವ ಆಧಾರದ ಮೇಲೆ ಪರಿಗಣನೆ ಮಾಡಲಾಗಿದೆ ಎಂಬ ಆರೋಗ್ಯ ತಜ್ಞರು ಮತ್ತು ಪ್ರತಿಪಕ್ಷದ ಕಳವಳವನ್ನು ನಿವಾರಿಸಲು ಸರ್ಕಾರ ಬಹುವಾಗಿ ಶ್ರಮಿಸಿದೆ.</p>.<p>8. 2019 ರ ಅಂತ್ಯದಲ್ಲಿ ಚೀನಾದ ವುಹಾನ್ನಲ್ಲಿ ಕಾಣಿಸಿಕೊಂಡ ಕೊರೊನಾ ಸೋಂಕು ಜನವರಿಯಲ್ಲಿ ಭಾರತದಲ್ಲಿ ಕಾಣಿಸಿಕೊಂಡಿತು. ಈ ಸಾಂಕ್ರಾಮಿಕ ರೋಗವು ದೇಶದಲ್ಲಿ ಇದುವರೆಗೆ 1.5 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 1.05 ಕೋಟಿಗೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>