ಲಖನೌ: ವಿರೋಧ ಪಕ್ಷಗಳು ಭಗವಾನ್ ರಾಮನ ವಿರುದ್ಧವಾಗಿವೆ ಎಂದು ಶನಿವಾರ ಆರೋಪಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ‘ಇಂತಹ ರಾಮ ದ್ರೋಹಿಗಳು ಕೇವಲ ನಂಬಿಕೆಗಷ್ಟೇ ಘಾಸಿಯುಂಟುಮಾಡುತ್ತಿಲ್ಲ, ಬದಲಾಗಿ ಸಾಮಾಜಿಕ ಸಂರಚನೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ ಅಭಿವೃದ್ಧಿಗೂ ಅಡ್ಡಿಪಡಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.