ಶನಿವಾರ ರಾತ್ರಿ 10 ಗಂಟೆಗೆ ಈ ಬಾಂಬ್ ಇರಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳದವರು ಅದನ್ನು ಭಾನುವಾರ ಮಧ್ಯಾಹ್ನ 1 ಗಂಟೆಗೆ ನಾಶಪಡಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ. ಉಗ್ರರು ಬಾಂಬ್ ಅಳವಡಿಸಿದ್ದ ವಾಹನವನ್ನು ಈ ಸ್ಥಳದಲ್ಲಿ ಇರಿಸಿ, ಸಮೀಪವೇ ಇರುವ ಅರಣ್ಯ ಪ್ರದೇಶಕ್ಕೆ ತೆರಳಿರುವ ಶಂಕೆ ಇದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಆಂಗ್ರಾಲ್ ಹೇಳಿದರು.