‘2016ರಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಅಡಿ 8 ಕೋಟಿ ಕುಟುಂಬಗಳಿಗೆ ಸಬ್ಸಿಡಿ ಸಹಿತ ಎಲ್ಪಿಜಿ ಸಂಪರ್ಕಗಳನ್ನು ನೀಡಲಾಗಿತ್ತು. ಆದರೆ ಪ್ರಸ್ತುತ 1,000 ಕ್ಕೂ ಹೆಚ್ಚು ಬೆಲೆಯ ಸಿಲಿಂಡರ್ಗಳನ್ನು ಕೊಳ್ಳಲು ಆಗುತ್ತಿಲ್ಲ. ಇಂದಿಗೂ ಸಾಕಷ್ಟು ಕುಟುಂಬಗಳು ಉರುವಲು ಅಥವಾ ಭರಣಿಗಳ ಮೇಲೆ ಅವಲಂಬಿತವಾಗಿದ್ದು, ಇದರಿಂದ ಅಸ್ತಮಾ, ಬ್ರಾಂಕೈಟಿಸ್, ಶಿಶುಮರಣ, ಬೆಳವಣಿಗೆ ಕುಂಠಿತದಂತಹ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಆದ್ದರಿಂದ ಸೂಕ್ತ ಸಬ್ಸಿಡಿಯೊಂದಿಗೆ ಅಡುಗೆ ಸಿಲಿಂಡರ್ ಮತ್ತು ರೀಫಿಲ್ಗಳನ್ನು ಒದಗಿಸಬೇಕು. ಪ್ರಸ್ತುತ ಇರುವ ಸಬ್ಸಿಡಿ ಮೊತ್ತವನ್ನು ₹200 ಗೆ ಹೆಚ್ಚಿಸಬೇಕು’ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.