ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೆಗಾಂವ್‌ ಸ್ಫೋಟ: ಆರೋಪಿ ಜಾಮೀನು ರದ್ದು ಅರ್ಜಿ ತಿರಸ್ಕರಿಸಿದ ಎನ್‌ಐಎ 

Last Updated 30 ಜೂನ್ 2022, 14:27 IST
ಅಕ್ಷರ ಗಾತ್ರ

ಮುಂಬೈ: ಮಾಲೆಗಾಂವ್ ಸ್ಫೋಟದ ಆರೋಪಿ ಸುಧಾಕರ್ ದ್ವೀವೇದಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತು ವಿಧಿಸಿ 2008ರ ಸ್ಫೋಟ ಪ್ರಕರಣದ ಆರೋಪಿಗೆ 2017ರಲ್ಲಿ ಜಾಮೀನು ನೀಡಲಾಗಿತ್ತು.

’ಕೋರ್ಟ್ ಅನುಮತಿ ಪಡೆಯದೆ, ಷರತ್ತು ಉಲ್ಲಂಘಿಸಿ ಸುಧಾಕರ್ ನೇಪಾಳಕ್ಕೆ ತೆರಳಿದ್ದಾರೆ. ಹಾಗಾಗಿ ಜಾಮೀನು ರದ್ದುಗೊಳಿಸಬೇಕು‘ ಎಂದು ಕೋರಿ ಸಂತ್ರಸ್ತರೊಬ್ಬರ ತಂದೆ ನಿಸಾರ್ ಅಹಮದ್ ಬಿಲಾಲ್‌ ವಕೀಲರ ಮೂಲಕ ಮನವಿ ಸಲ್ಲಿಸಿದ್ದಾರೆ. ನೇಪಾಳ ಪ್ರವಾಸ ಕುರಿತು ಫೋಟೊಗಳನ್ನು ಸಹ ಕೋರ್ಟ್‌ಗೆ ಸಲ್ಲಸಿದ್ದರು.

ಅರ್ಜಿ ತಿರಸ್ಕರಿಸಿದವಿಶೇಷ ನ್ಯಾಯಾಧೀಶ ಎ.ಕೆ.ಲಹೋಟಿ, ಇನ್ನು ಮುಂದೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸದಂತೆ ಆರೋಪಿಗೆ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT