ನವದೆಹಲಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನವದೆಹಲಿಯ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ, ಪಕ್ಷ ಸಂಘ ಟನೆ ಬಗ್ಗೆ ಸಮಾಲೋಚನೆ ನಡೆಸಿದರು.
ಬಳಿಕ ಸುದ್ದಿಗಾರರ ಜತೆಗೆ ಮಾತ ನಾಡಿದ ಶಿವಕುಮಾರ್, ‘ರಾಜ್ಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಅಧ್ಯಕ್ಷರು ಕೆಲವು ಹಿತವಚನಗಳನ್ನು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲೇಬೇಕು ಎಂದು ಹೇಳಿದ್ದಾರೆ. ಈ ಸಂಬಂಧ ಮಾರ್ಗದರ್ಶನ ನೀಡಿದ್ದಾರೆ’ ಎಂದರು.
‘ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಿದೆ. ಹೀಗಾಗಿ, ಅರ್ಜಿ ಸಲ್ಲಿಕೆ ಅವಧಿಯನ್ನು ನಾಲ್ಕು ದಿನ ವಿಸ್ತರಣೆ ಮಾಡಲಾಗಿದೆ’ ಎಂದರು.